ಬ್ರೇಕಿಂಗ್ ನ್ಯೂಸ್
26-04-24 02:58 pm HK News Desk ದೇಶ - ವಿದೇಶ
ಬಿಹಾರ, ಏ 26: ಬೆಂಕಿ ಅನಾಹುತದಿಂದ ಮದುವೆ ಮನೆ ಅಕ್ಷರಶಃ ಶೋಕದ ಮನೆಯಾಗಿ ಮಾರ್ಪಟ್ಟಿರುವ ಘಟನೆ ನಡೆದಿದೆ. ಮದುವೆ ಮೆರವಣಿಗೆ ಸಂಭ್ರಮದಲ್ಲಿ ಹಚ್ಚಿದ್ದ ಪಟಾಕಿ ಕಿಡಿಯಿಂದ ಆದ ಅಗ್ನಿ ಅನಾಹುತದಲ್ಲಿ ಮೂರು ಜಾನುವಾರು, ನವ ದಂಪತಿ ಸೇರಿ ಆರು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿರುವ ಘಟನೆ ದರ್ಬಾಂಗ್ನಲ್ಲಿ ನಡೆದಿದೆ.
ಗುರುವಾರ ರಾತ್ರಿ ಮದುವೆ ಮೆರವಣಿಗೆ ಹಿನ್ನೆಲೆ ಸಂಭ್ರಮದಿಂದ ಪಟಾಕಿ ಹೊಡೆಯಲಾಗಿದ್ದು, ಈ ಬೆಂಕಿ ಕಿಡಿ ಸಿಲಿಂಡರ್ ಮತ್ತು ಡೀಸೆಲ್ ಸಂಗ್ರಹಕ್ಕೆ ಬಿದ್ದ ಪರಿಣಾಮ ಈ ಭಾರಿ ಅನಾಹುತ ಸಂಭವಿಸಿದೆ. ಘಟನೆ ಬೆಳಕಿಗೆ ಬಂದಾಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಅಗ್ನಿ ಶಾಮಕದಳ ಕೂಡ ಬೆಂಕಿ ಆರಿಸುವ ಯತ್ನದಲ್ಲಿ ನಿರತರವಾಯಿತು.
ಬಹೇರಾ ಪೊಲೀಸ್ ಠಾಣೆಯ ಅಂತೋರ್ ಗ್ರಾಮದಲ್ಲಿ ಛಗನ್ ಪಾಸ್ವಾನ್ ಅವರ ಮಗಳ ಮದುವೆ ಸಮಾರಂಭ ಅದ್ದೂರಿಯಾಗಿ ಏರ್ಪಡಿಸಲಾಗಿತ್ತು. ಸಮಾರಂಭದ ಹಿನ್ನೆಲೆ ಮನೆಯ ಪಕ್ಕದಲ್ಲಿ ಅತಿಥಿಗಳು ತಂಗಲು ಮತ್ತು ಊಟದ ವ್ಯವಸ್ಥೆ ಮಾಡಲಾಗಿತ್ತು. ಗುರುವಾರ ರಾತ್ರಿ ಮದುವೆ ದಿಬ್ಬಣ ಬಂದಿದ್ದು, ಅದ್ದೂರಿಯಾಗಿ ಸಂಭ್ರಮಾಚರಣೆ ಸಾಗಿತ್ತು. ಈ ವೇಳೆ ಪಟಾಕಿ ಹೊಡೆಯಾಗಿದ್ದು, ಇದರ ಕಿಡಿ ಹಾಕಿದ್ದ ಶಾಮೀಯಾನದ ಮೇಲೆ ಬಿದ್ದ ಪರಿಣಾಮ ಇಡೀ ಟೆಂಟ್ ಹೊತ್ತಿ ಉರಿದಿದೆ. ಈ ವೇಳೆ ಅಲ್ಲಿಯೇ ಇದ್ದ ಸಿಲಿಂಡರ್ ಮತ್ತು ಡೀಸೆಲ್ ಸಂಗ್ರಹಕ್ಕೂ ಕಿಡಿ ತಗುಲಿದ್ದು, ಭಾರೀ ಅನಾಹುತ ಸಂಭವಿಸಿತು. ನವ ದಂಪತಿ ಸೇರಿ 6 ಮಂದಿ ಸಜೀವ ದಹನ ಆಗಿದ್ದಾರೆ.
ದುರ್ಘಟನೆ ತಿಳಿದಾಕ್ಷಣ ಗ್ರಾಮಸ್ಥರು ಆಗಮಿಸಿ ಬೆಂಕಿ ನಿಯಂತ್ರಿಸಲು ಹರಸಾಹಸ ಮಾಡಿದರು. ಆದರೆ, ಸಿಲಿಂಡರ್ ಮತ್ತು ಡೀಸೆಲ್ ಗೆ ಕಿಡಿ ತಗುಲಿದ ಹಿನ್ನಲೆ ಬೆಂಕಿ ಕೆನ್ನಾಲಿಗೆ ಚಾಚಿತು. ಇದರಿಂದ ಮೂರು ಜಾನುವಾರು ಸೇರಿದಂತೆ 6 ಮಂದಿಯನ್ನ ರಕ್ಷಿಸುವ ಯತ್ನವೂ ವಿಫಲವಾಯಿತು.
At least six people were killed and six others injured after a cylinder exploded during a wedding ceremony in Bihar’s Darbhanga on Thursday night, police said on Friday. The incident took place after a major blaze erupted due to bursting fireworks at the wedding in Antor village of the Bahera police station area, they said.
10-05-24 10:11 am
HK News Desk
Mandya SSLC Suicide, Student: SSLC ಪಾಸಾಗಿದ್ದರ...
09-05-24 11:03 pm
Hassan, Mandya Suicide: ಹಾಸನದಲ್ಲಿ ಅತಿಥಿ ಉಪನ್ಯ...
09-05-24 09:17 pm
SSLC results 2024, Udupi, Mangalore: ಎಸ್ಸೆಸ್...
09-05-24 11:39 am
SSLC Result 2024, Online: ಮೇ 9ಕ್ಕೆ SSLC ಫಲಿತಾ...
08-05-24 04:37 pm
10-05-24 10:06 am
HK News Desk
Hindu population in India: ಭಾರತದಲ್ಲಿ ಹಿಂದುಗಳ...
09-05-24 07:59 pm
Air India Express: ಏರ್ ಇಂಡಿಯಾ ಕ್ಯಾಬಿನ್ ಸಿಬಂದಿ...
09-05-24 11:56 am
ಸೈಡ್ ಇಫೆಕ್ಟ್ ಬಗ್ಗೆ ಜಾಗತಿಕ ಮಟ್ಟದಲ್ಲಿ ಆಕ್ರೋಶ ;...
08-05-24 11:59 am
ಹೈದರಾಬಾದ್ ; ಭಾರೀ ಮಳೆಗೆ ಗೋಡೆ ಕುಸಿತ, 4 ವರ್ಷದ ಮಗ...
08-05-24 10:44 am
10-05-24 12:39 pm
Mangalore Correspondent
Accident in Mangalore, Naguri: ಹಾಡಹಗಲೇ ಟಿಪ್ಪರ...
09-05-24 11:06 pm
ಪರೀಕ್ಷೆ ಹಾಲ್ ಬಿಟ್ಟು ಕಣ್ಮರೆಯಾಗಿದ್ದ ಎಂಎಸ್ಸಿ ವಿದ...
09-05-24 10:04 pm
KMC, Mangalore News: ಮೆಡಿಕಲ್ ಕಾಲೇಜಿನ ಮಹಿಳಾ ಶೌ...
09-05-24 06:33 pm
Mangalore news, Student missing: ರೋಶನಿ ನಿಲಯದಲ...
08-05-24 10:48 pm
10-05-24 12:44 pm
HK News Desk
NIA arrests Mustafa Paichar, Praveen Nettaru...
10-05-24 11:53 am
Kodagu Murder, SSLC Student: ಕೊಡಗಿನಲ್ಲಿ SSLC...
10-05-24 10:16 am
Mangalore crime, cyber fraud, online CBI: ಮುಂ...
09-05-24 07:17 pm
Jyothi Rai Video Viral, Photo: ಹಾಟ್ ಬೆಡಗಿ ಜ್ಯ...
09-05-24 04:51 pm