ಬ್ರೇಕಿಂಗ್ ನ್ಯೂಸ್
12-06-23 10:22 pm Mangalore Correspondent ಕಾಲೇಜು ಕ್ಯಾಂಪಸ್
ಮಂಗಳೂರು, ಜೂನ್ 12: ನಗರದ ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ ಆಯೋಜಿಸಿದ್ದ ಬಿ.ಪಿ.ಎಲ್ ಕ್ರಿಕೆಟ್ ಪಂದ್ಯಾವಳಿ ಪದುವಾ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ಜರಗಿತು. ಪಂದ್ಯಾವಳಿಯನ್ನು ಬೆಸೆಂಟ್ ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಸತೀಶ ಕುಮಾರ ಭಟ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ಬೆಸೆಂಟ್ ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ.ಲಕ್ಷೀನಾರಾಯಣ ಭಟ್, ಸಂಘದ ಮಾಜಿ ಸಲಹೆಗಾರರಾದ ಗಣಪತಿ ಭಟ್ ಎಂ, ಡಾ. ವಾಸಪ್ಪಗೌಡ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್, ಕಾರ್ಯದರ್ಶಿ ಪ್ರಣವ್ ಗಣೇಶ್. ಕ್ರೀಡಾ ಕಾರ್ಯದರ್ಶಿ ಮನೀಷ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




ಪಂದ್ಯಾವಳಿಯಲ್ಲಿ ಆರು ತಂಡಗಳಾದ ಟೀಮ್ ವಿಕ್ಟರಿ, ಟೀಮ್ ಬ್ಲೂ ಸ್ಟ್ರೀಕ್, ಟೀಮ್ ಡಾಮಿನೇಟ್, ಟೀಮ್ ಮಾಂಕ್, ಆರೇಜ್ ಆರ್ಮಿ ಮತ್ತು ಟೀಮ್ ಮಾನ್ಸ್ಟರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ವಿಜೇತ ತಂಡಗಳಿಗೆ ಹಾಗೂ ಸರಣಿ ಶ್ರೇಷ್ಠ ಕ್ರೀಡಾಪಟುಗಳಿಗೆ ಆಕರ್ಷಕ ಬಹುಮಾನಗಳನ್ನು ಘೋಷಿಸಲಾಗಿತ್ತು. ದಿನವಿಡೀ ನಡೆದ ಲೀಗ್ ಸ್ಪರ್ಧೆಯಲ್ಲಿ ಲೋಹಿತ್ ಬಜಾಲ್ ಮಾಲಕತ್ವದ ಆರೇಜ್ ಆರ್ಮಿ ತಂಡವು ಜಯಶಾಲಿಯಾಗಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಗೌರವ್ ಮೊಹ್ಲಿ ಮಾಲಕತ್ವದ ಟೀಮ್ ವಿಕ್ಟರಿ ತಂಡವು ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿತು.



ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಹಳೆ ವಿದ್ಯಾರ್ಥಿ ಉದಯ್ ಆಚಾರ್, ಕಾಲೇಜು ಪ್ರಾಂಶುಪಾಲರಾದ ಡಾ. ಲಕ್ಷೀನಾರಾಯಣ ಭಟ್ ಹಾಗೂ ಎಸ್.ಡಿ.ಎಂ ಉಪನ್ಯಾಸಕರಾದ ಪ್ರವೀಣ ದೆಂಗೋಡಿ ವಿಜೇತರಿಗೆ ಬಹುಮಾನ ವಿತರಿಸಿದರು. ಮದುರಾಜ್ ಅವರು ಸರಣಿ ಶ್ರೇಷ್ಠ, ಅಂಬಾತನಯ ಶ್ರೇಷ್ಠ ದಾಂಡಿಗನಾಗಿ ಹಾಗೂ ಸುನೀಲ್ ಶ್ರೇಷ್ಠ ಎಸೆತಗಾರನಾಗಿ ಪ್ರಶಸ್ತಿ ಪಡೆದರು. ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ವಂದಿಸಿದರು. ಪ್ರತೀಶ್ ಗೌರೀಶ್ ಕಾರ್ಯಕ್ರಮ ನಿರೂಪಿಸಿದರು.
Alumni of Besant Evening college host BPL cricket Match 2023 in Mangalore.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm