ಬ್ರೇಕಿಂಗ್ ನ್ಯೂಸ್
26-05-22 12:38 pm HK News Desk ಕ್ರೈಂ
ಕಲಬುರಗಿ, ಮೆ 26: ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕನನ್ನ ಜನನಿಬಿಡ ಪ್ರದೇಶದ ನಡುರಸ್ತೆಯಲ್ಲಿಯೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೋಲೆಯಾದ ಯುವಕ ಎಂದು ಗುರುತಿಸಲಾಗಿದೆ. ವಿಜಯ ಅನ್ಯಕೋಮಿನ ಯುವತಿಯನ್ನ ಪ್ರೀತಿ ಮಾಡುತ್ತಿದ್ದನಂತೆ. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಹಾಗೂ ಸಹೋದರರು ಸೇರಿ ವಿಜಯನನ್ನ ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನ ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾನೆ.
ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದೆ. ಯುವಕನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂಥ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟದ ಸುತ್ತಲೂ ಬಿಗಿ ಪೋಲಿಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಕೇಸ್ನ ಕುರಿತು ತನಿಖೆ ಆರಂಭಿಸಿದ ಪೋಲಿಸರು ಹಂತಕರ ಹೆಡೆಮುರಿ ಕಟ್ಟಲು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಪ್ರೀತಿಸಿದ ತಪ್ಪಿಗೆ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರೆ, ಇತ್ತ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಅನಾಥಳಾಗಿ ಕಣ್ಣಿಡುತ್ತಿದ್ದಾಳೆ.
Kalaburgi 25 year old boy murdered brutally for loving Muslim Girl. The deceased has been identified as Vijay Kambale.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm