ಬ್ರೇಕಿಂಗ್ ನ್ಯೂಸ್
26-05-22 12:38 pm HK News Desk ಕ್ರೈಂ
ಕಲಬುರಗಿ, ಮೆ 26: ಅನ್ಯಕೋಮಿನ ಯುವತಿಯನ್ನ ಪ್ರೀತಿಸುತ್ತಿದ್ದ ಯುವಕನನ್ನ ಜನನಿಬಿಡ ಪ್ರದೇಶದ ನಡುರಸ್ತೆಯಲ್ಲಿಯೇ ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ.
ವಾಡಿ ಪಟ್ಟಣದ ಭೀಮನಗರ ಬಡಾವಣೆ ನಿವಾಸಿ ವಿಜಯ ಕಾಂಬಳೆ (25) ಕೋಲೆಯಾದ ಯುವಕ ಎಂದು ಗುರುತಿಸಲಾಗಿದೆ. ವಿಜಯ ಅನ್ಯಕೋಮಿನ ಯುವತಿಯನ್ನ ಪ್ರೀತಿ ಮಾಡುತ್ತಿದ್ದನಂತೆ. ಇದೇ ಕಾರಣಕ್ಕೆ ಯುವತಿಯ ಕುಟುಂಬಸ್ಥರು ಹಾಗೂ ಸಹೋದರರು ಸೇರಿ ವಿಜಯನನ್ನ ಕೊಲೆಗೈದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದೈನಂದಿನಂತೆ ವಾಡಿ ಪಟ್ಟಣದಲ್ಲಿ ಓಡಾಡಿಕೊಂಡಿದ್ದ ವಿಜಯನನ್ನ ರೈಲ್ವೆ ತಡೆಗೋಡೆ ಹತ್ತಿರ ತಡೆದು ಜಗಳ ತೆಗೆದ ದುಷ್ಕರ್ಮಿಗಳು, ಮಾರಕಾಸ್ತ್ರ, ಕಲ್ಲು ಕಟ್ಟಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲಿದ ಯುವಕ ಸ್ಥಳದಲ್ಲಿಯೇ ವಿಲವಿಲ ಒದ್ದಾಡಿ ಸಾವನ್ನಪ್ಪಿದ್ದಾನೆ.
ಕೊಲೆ ಪ್ರಕರಣದಿಂದ ವಾಡಿ ಪಟ್ಟಣದಲ್ಲಿ ಆತಂಕದ ಛಾಯೆ ಆವರಿಸಿದೆ. ಯುವಕನ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಇನ್ನು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ಮಾಡಿದ ಪೊಲೀಸರು ಹಂತಕರ ಶೋಧಕಾರ್ಯ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ ಪಿ ಇಶಾ ಪಂಥ ಭೇಟಿ ನೀಡಿ ಪರಿಸ್ಥಿತಿ ವಿಚಾರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪಟ್ಟದ ಸುತ್ತಲೂ ಬಿಗಿ ಪೋಲಿಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಕೇಸ್ನ ಕುರಿತು ತನಿಖೆ ಆರಂಭಿಸಿದ ಪೋಲಿಸರು ಹಂತಕರ ಹೆಡೆಮುರಿ ಕಟ್ಟಲು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಟ್ಟಿನಲ್ಲಿ ಪ್ರೀತಿಸಿದ ತಪ್ಪಿಗೆ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರೆ, ಇತ್ತ ಇದ್ದ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಅನಾಥಳಾಗಿ ಕಣ್ಣಿಡುತ್ತಿದ್ದಾಳೆ.
Kalaburgi 25 year old boy murdered brutally for loving Muslim Girl. The deceased has been identified as Vijay Kambale.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm