ಬ್ರೇಕಿಂಗ್ ನ್ಯೂಸ್
01-06-22 12:07 pm HK News Desk ಕ್ರೈಂ
ತಿರುಚ್ಚಿ, ಜೂ 1: ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿಯೊಬ್ಬಳು ತನ್ನ ಪ್ರೀತಿಯನ್ನು ಒಪ್ಪಿಕೊಳ್ಳಲು ನಿರಾಕರಿಸಿದ್ದಕ್ಕಾಗಿ 22 ವರ್ಷದ ಯುವಕ ಆಕೆಯನ್ನು 14 ಬಾರಿ ಇರಿದು ಪರಾರಿಯಾಗಿದ್ದ.
ಆರೋಪಿ ವ್ಯಕ್ತಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಹುಡುಕುತ್ತಿದ್ದಾಗ ಆತನೂ ಕೂಡ ಶವವಾಗಿ ಪತ್ತೆಯಾಗಿದ್ದಾನೆ.
ತಿರುಚ್ಚಿಯ ಅತಿಕುಲಂ ನಿವಾಸಿಯಾಗಿರುವ ಬಾಲಕಿ 11ನೇ ತರಗತಿಯಲ್ಲಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿ ಸಂತ್ರಸ್ತೆ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಆರೋಪಿ ಕೇಶವನ್ ರೈಲ್ವೇ ಮೇಲ್ಸೇತುವೆ ಬಳಿ ಆಕೆಯನ್ನು ತಡೆಗಟ್ಟಿ ತನ್ನ ಪ್ರೀತಿ ಒಪ್ಪಿಕೊಳ್ಳುವುದಕ್ಕಾಗಿ ಪೀಡಿಸಿದ್ದಾನೆ.
ಜೂನ್ 2021ರಲ್ಲಿ ಇದೇ ಹುಡುಗಿಯನ್ನು ಅಪಹರಿಸಿದ್ದಕ್ಕಾಗಿ ಕೇಶವನ್ ಮೇಲೆ ಈಗಾಗಲೇ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿತ್ತು ಎಂದು ಸಂತ್ರಸ್ತೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ.

ಬಾಲಕಿಗೆ 14 ಬಾರಿ ಇರಿದ ಕೇಶವನ್ ;
ಚೂರಿ ಇರಿತದ ದಿನ ತಾನು ಆಕೆಯನ್ನು ಪ್ರೀತಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದ ಕೇಶವನ್ ಬಾಲಕಿ ಆತನ ಪ್ರೀತಿ ನಿರಾಕರಿಸಿದಾಗ ಚಾಕುವಿನಿಂದ ಇರಿದಿದ್ದಾನೆ. ಜೊತೆಗೆ ಬಾಲಕಿ ಸಹಾಯಕ್ಕಾಗಿ ಕೂಗುವಾಗ ಕೇಶವನ್ ಆಕೆಗೆ 14 ಬಾರಿ ಇರಿದಿದ್ದಾನೆ. ಬಳಿಕ ಚಾಕುವನ್ನು ಸ್ಥಳದಲ್ಲೇ ಬಿಟ್ಟು ಓಡಿ ಹೋಗಿದ್ದಾನೆ. ಬಾಲಕಿ ಕೆಳಗೆ ಬಿದ್ದಿರುವುದನ್ನು ಕಂಡ ಸ್ಥಳೀಯರು ಆಕೆಯ ದೇಹದಿಂದ ರಕ್ತ ಹರಿಯುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಕೆ ಚಿಂತಾಜನಕ ಸ್ಥಿತಿಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಶವವಾಗಿ ಪತ್ತೆಯಾದ ಆರೋಪಿ;
ಆರೋಪಿಯನ್ನು ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಮೂರು ವಿಶೇಷ ತಂಡಗಳು ಶೋಧ ನಡೆಸುತ್ತಿದ್ದವು. ಮಂಗಳವಾರ ರಾತ್ರಿ ರೈಲ್ವೆ ಹಳಿ ಮೇಲೆ ಆರೋಪಿ ಶವವಾಗಿ ಪತ್ತೆಯಾಗಿದ್ದಾನೆ.
A 16-year-old girl in Tamil Nadu’s Trichy was stabbed 14 times by a 22-year-old man for refusing to accept his love. The man was identified as Kesavan and police are hunting him.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm