ಬ್ರೇಕಿಂಗ್ ನ್ಯೂಸ್
04-06-22 09:31 pm Mangalore Correspondent ಕ್ರೈಂ
ಮಂಗಳೂರು, ಜೂನ್ 4: ಇಎಸ್ಐ ಪಣಂಬೂರು ವಿಭಾಗದ ಡಿಸ್ಪೆನ್ಸರಿ ಘಟಕದಲ್ಲಿ ಫಾರ್ಮಸಿಸ್ಟ್ ಆಗಿದ್ದುಕೊಂಡು ಕಾರ್ಮಿಕರ ಚಿಕಿತ್ಸೆಗೆ ಹಣ ಪಾವತಿಸಲು ಲಂಚ ಕೇಳಿದ ಆರೋಪದಲ್ಲಿ ಅಧಿಕಾರಿಯೊಬ್ಬರನ್ನು ಎಸಿಬಿ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ವಿಷ್ಣುಮೂರ್ತಿ ಭಟ್ ಎಸಿಬಿ ಬಲೆಗೆ ಬಿದ್ದ ಫಾರ್ಮಸಿ ಅಧಿಕಾರಿ. ಪ್ರಕರಣದಲ್ಲಿ ಎಸಿಬಿಗೆ ದೂರು ನೀಡಿದ್ದ ಪ್ರಶಾಂತ್ ಕುಮಾರ್ ಅನಾರೋಗ್ಯಕ್ಕೆ ಒಳಗಾಗಿದ್ದು ಬೇಕರಿ ಒಂದರಲ್ಲಿ ನೌಕರಿಯಾಗಿದ್ದ ಪತ್ನಿಯ ಇಎಸ್ಐ ಸೌಲಭ್ಯ ಬಳಸಿಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆನಂತರ, ಖಾಸಗಿ ವೈದ್ಯರು ಬರೆದುಕೊಟ್ಟಿದ್ದ ಔಷಧಿ ಚೀಟಿಯಲ್ಲಿದ್ದ ಔಷಧಿಗಳು ಇಎಸ್ಐ ಡಿಸ್ಪೆನ್ಸರಿ ಘಟಕದಲ್ಲಿ ಸಿಕ್ಕಿರಲಿಲ್ಲ. ಹಾಗಾಗಿ ಬೇರೆ ಖಾಸಗಿ ಮೆಡಿಕಲ್ ನಿಂದ ಔಷಧಿಯನ್ನು ಪಡೆದುಕೊಂಡಿದ್ದರು.
ಆನಂತರ, ಔಷಧಿಯ ಬಿಲ್ ಮೊತ್ತವನ್ನು ಇಎಸ್ಐ ಡಿಸ್ಪೆನ್ಸರಿ ವಿಭಾಗಕ್ಕೆ ಕೊಟ್ಟು ಅಲ್ಲಿಂದ ಹಣವನ್ನು ಇಎಸ್ಐ ಸೌಲಭ್ಯ ಹೊಂದಿದ್ದ ಮಹಿಳೆಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಬೇಕಿತ್ತು. ಆದರೆ, ಬಿಲ್ ಮೊತ್ತವನ್ನು ಪಾವತಿ ಮಾಡಬೇಕಿದ್ದಲ್ಲಿ ಎರಡು ಸಾವಿರ ರೂಪಾಯಿ ಲಂಚ ನೀಡುವಂತೆ ಅಲ್ಲಿನ ಅಧಿಕಾರಿ ಕೇಳಿದ್ದರು. ಈ ಬಗ್ಗೆ ಪ್ರಶಾಂತ್ ಕುಮಾರ್ ಎಸಿಬಿಗೆ ದೂರು ನೀಡಿದ್ದು, ಶನಿವಾರ ಮಧ್ಯಾಹ್ನ ಪೊಲೀಸರ ಸೂಚನೆಯಂತೆ ಹಣವನ್ನು ನೀಡುತ್ತಿದ್ದಾಗಲೇ ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ಕೆ.ಸಿ.ಪ್ರಕಾಶ್, ಇನ್ಸ್ ಪೆಕ್ಟರ್ ಶ್ಯಾಮಸುಂದರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಯನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
Sleuths of the Anti-Corruption Bureau (ACB) apprehended a staff of ESI Hospital in Panambur accepting a bribe for releasing money to a patient.
The arrested has been identified as Vishnumurthi, who works as a senior pharmacist at the ESI Hospital in Panambur.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm