ಬ್ರೇಕಿಂಗ್ ನ್ಯೂಸ್
28-09-20 05:20 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 28: ಲೇಡಿಸ್ ಹಾಸ್ಟೆಲ್ ನುಗ್ಗಿ ಮೆಡಿಕಲ್ ವಿದ್ಯಾರ್ಥಿನಿಯ ಅತ್ಯಾಚಾರ ಗೈದು ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಿಂದ ಏಳು ವರ್ಷಗಳ ಶಿಕ್ಷೆ ನೀಡಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈದುನ್ನೀಸಾ ಈ ತೀರ್ಪು ನೀಡಿದ್ದಾರೆ. ಅಪರಾಧಿ ಎಂದು ಪರಿಗಣಿಸಲ್ಪಟ್ಟ ನಾಗೇಶ್ (30) ಗೆ ಏಳು ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲಾಗಿದೆ.

2007 ರಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಠೆಯ ಹಾಸ್ಟೇಲ್ ಒಂದರಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದಳು.
ಮುಂಜಾನೆ 4.30 ರ ಸುಮಾರಿಗೆ ಹಾಸ್ಟೆಲ್ ಹಿಂಭಾಗದ ಪೈಪ್ ಮೂಲಕ ಕೊಠಡಿಗೆ ನುಗ್ಗಿದ್ದ ಆರೋಪಿ, ವಿದ್ಯಾರ್ಥಿನಿಯ ಅತ್ಯಾಚಾರಗೈದು ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ನಗದು ನೀಡುವಂತೆ ಒತ್ತಾಯಿಸಿದ್ದ. ಬಳಿಕ ವಿದ್ಯಾರ್ಥಿನಿಯ ಪರ್ಸ್ ನಿಂದ ಮೂರು ಸಾವಿರ ನಗದು, ಎಟಿಎಂ ಕಾರ್ಡ್ ಸಹಿತ ಪಿನ್ ನಂಬರ್ ಪಡೆದು ಮತ್ತೊಂದು ಕೊಠಡಿಗೆ ನುಗ್ಗಿ ಇನ್ನೊಬ್ಬಳು ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿ ಪರಾರಿಯಾಗಿದ್ದ.
ಕೃತ್ಯದ ಬಳಿಕ ಆರೋಪಿ, ನಗರದ ಕಂಕನಾಡಿ ಎಟಿಎಂ ನಲ್ಲಿ ವಿದ್ಯಾರ್ಥಿನಿಯ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು. ಬೆರಳಚ್ಚು ಮತ್ತು ಎಟಿಎಂ ಸಿಸಿ ಟಿವಿ ಆಧರಿಸಿ ಅಪರಾಧಿಯ ಪತ್ತೆ ಮಾಡಿದ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ಕೃತ್ಯ ಸಾಬೀತಾಗಿದ್ದರಿಂದ ಶಿಕ್ಷೆ ಘೋಷಣೆ ಮಾಡಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am