ಬ್ರೇಕಿಂಗ್ ನ್ಯೂಸ್
28-09-20 05:20 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 28: ಲೇಡಿಸ್ ಹಾಸ್ಟೆಲ್ ನುಗ್ಗಿ ಮೆಡಿಕಲ್ ವಿದ್ಯಾರ್ಥಿನಿಯ ಅತ್ಯಾಚಾರ ಗೈದು ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಲಯದಿಂದ ಏಳು ವರ್ಷಗಳ ಶಿಕ್ಷೆ ನೀಡಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸೈದುನ್ನೀಸಾ ಈ ತೀರ್ಪು ನೀಡಿದ್ದಾರೆ. ಅಪರಾಧಿ ಎಂದು ಪರಿಗಣಿಸಲ್ಪಟ್ಟ ನಾಗೇಶ್ (30) ಗೆ ಏಳು ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲಾಗಿದೆ.

2007 ರಲ್ಲಿ ಉಳ್ಳಾಲ ಠಾಣಾ ವ್ಯಾಪ್ತಿಯ ದೇರಳಕಟ್ಠೆಯ ಹಾಸ್ಟೇಲ್ ಒಂದರಲ್ಲಿ ಘಟನೆ ನಡೆದಿತ್ತು. ಕೇರಳ ಮೂಲದ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸಂತ್ರಸ್ತೆಯಾಗಿದ್ದಳು.
ಮುಂಜಾನೆ 4.30 ರ ಸುಮಾರಿಗೆ ಹಾಸ್ಟೆಲ್ ಹಿಂಭಾಗದ ಪೈಪ್ ಮೂಲಕ ಕೊಠಡಿಗೆ ನುಗ್ಗಿದ್ದ ಆರೋಪಿ, ವಿದ್ಯಾರ್ಥಿನಿಯ ಅತ್ಯಾಚಾರಗೈದು ಕೊಲೆ ಬೆದರಿಕೆಯೊಡ್ಡಿ 5 ಲಕ್ಷ ನಗದು ನೀಡುವಂತೆ ಒತ್ತಾಯಿಸಿದ್ದ. ಬಳಿಕ ವಿದ್ಯಾರ್ಥಿನಿಯ ಪರ್ಸ್ ನಿಂದ ಮೂರು ಸಾವಿರ ನಗದು, ಎಟಿಎಂ ಕಾರ್ಡ್ ಸಹಿತ ಪಿನ್ ನಂಬರ್ ಪಡೆದು ಮತ್ತೊಂದು ಕೊಠಡಿಗೆ ನುಗ್ಗಿ ಇನ್ನೊಬ್ಬಳು ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿ ಪರಾರಿಯಾಗಿದ್ದ.
ಕೃತ್ಯದ ಬಳಿಕ ಆರೋಪಿ, ನಗರದ ಕಂಕನಾಡಿ ಎಟಿಎಂ ನಲ್ಲಿ ವಿದ್ಯಾರ್ಥಿನಿಯ ಕಾರ್ಡ್ ನಿಂದ ಹಣ ವಿತ್ ಡ್ರಾ ಮಾಡಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿತ್ತು. ಬೆರಳಚ್ಚು ಮತ್ತು ಎಟಿಎಂ ಸಿಸಿ ಟಿವಿ ಆಧರಿಸಿ ಅಪರಾಧಿಯ ಪತ್ತೆ ಮಾಡಿದ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಯ ಕೃತ್ಯ ಸಾಬೀತಾಗಿದ್ದರಿಂದ ಶಿಕ್ಷೆ ಘೋಷಣೆ ಮಾಡಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am