ಬ್ರೇಕಿಂಗ್ ನ್ಯೂಸ್
06-06-22 09:58 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 6: ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬೆನ್ನತ್ತಿ ನ್ಯಾಯ ಕೊಡಿಸಬೇಕಾದ ಪೊಲೀಸ್ ಅಧಿಕಾರಿಯ ವಿರುದ್ಧ ಆತನ
ಪತ್ನಿಯೇ ಪೊಲೀಸ್ ದೂರು ನೀಡಿದ್ದು, 13 ವರ್ಷದ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಬೆಂಗಳೂರಿನ ಜೆಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಹಿಳೆ ಜೆಸಿ ನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿರುವ ತನ್ನ ಗಂಡನ ವಿರುದ್ಧ ದೂರು ನೀಡಿದ್ದಾರೆ. ವಿಚಿತ್ರ ಅಂದರೆ, ಆರೋಪಿ ಪೊಲೀಸ್ ಅಧಿಕಾರಿ ದೂರು ನೀಡಿರುವ ಮಹಿಳೆಯ ಎರಡನೇ ಗಂಡನಾಗಿದ್ದಾನೆ. ಸದ್ಯಕ್ಕೆ ಆರೋಪಿ ಎಸೈ ವಿರುದ್ಧ ಪೋಕ್ಸೋ ಮತ್ತು ಅತ್ಯಾಚಾರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದಲ್ಲದೆ, ತನ್ನ ಜೊತೆಗೂ ಅನೈಸರ್ಗಿಕ ಲೈಂಗಿಕ ಚಟುವಟಿಕೆ ನಡೆಸಲು ಒತ್ತಾಯ ಮಾಡುತ್ತಾನೆಂದು ಮಹಿಳೆ ದೂರಿದ್ದಾರೆ.
ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು, ಮೊದಲ ಪತಿ ಕಿರುಕುಳ ನೀಡುತ್ತಿದ್ದ ಬಗ್ಗೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಠಾಣೆಯಲ್ಲಿ ಹೇಳಿಕೆಯನ್ನು ದಾಖಲಿಸಲು ಹೋಗಿದ್ದಾಗ, ಅಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬ ಪರಿಚಯ ಆಗಿದ್ದ. ಪರಿಚಯ ಸ್ನೇಹಕ್ಕೆ ತಿರುಗಿದ್ದು ಮಹಿಳೆಗೆ ಮೊದಲ ಪತಿಯಿಂದ ವಿಚ್ಚೇದನ ಸಿಕ್ಕಿದ ಬಳಿಕ ಪೊಲೀಸ್ ಅಧಿಕಾರಿಯೇ ಈಕೆಯನ್ನು ಮದುವೆಯಾಗಿದ್ದ. ಪೊಲೀಸ್ ಅಧಿಕಾರಿಯೂ ಮೊದಲ ಪತ್ನಿಯಿಂದ ವಿಚ್ಚೇದನ ಪಡೆದಿದ್ದ ಕಾರಣ, ಇಬ್ಬರೂ ಜೊತೆಯಾಗಿದ್ದರು.
ಮಹಿಳೆಗೆ ಮೊದಲ ಪತಿಯ ಜೊತೆಗಿನ ಜೀವನದಲ್ಲಿ ಹೆಣ್ಣು ಮಗುವಾಗಿದ್ದು, ಈಗ ಆಕೆಗೆ 13 ವರ್ಷ ತುಂಬಿದೆ. ಜೊತೆಗೆ, ಮಹಿಳೆ ಇನ್ನೊಬ್ಬ ಸ್ವಂತ ತಂಗಿಯನ್ನೂ ಹೊಂದಿದ್ದಾಳೆ. ಕಾಮುಕ ಪೊಲೀಸ್ ಅಧಿಕಾರಿ 13 ವರ್ಷದ ಮಗಳು ಮತ್ತು ಪತ್ನಿಯ ತಂಗಿಯ ಮೇಲೆ ಕಣ್ಣು ಹಾಕಿದ್ದು, ಪತ್ನಿಯ ಕಣ್ಣು ತಪ್ಪಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಸರಿಯಾಗಿಯೇ ಇದ್ದ ಪತಿ, ಈಗ ವಿಕೃತ ಕಾಮ ಪೂರೈಸಿಕೊಳ್ಳಲು ಮುಂದಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Bangalore Police inspector alleged of raping his 13-year-old daughter, wife files complaint at J J Nagar Police Station. The wife who has lodged a complaint against the inspector is said to be his second wife.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm