ಬ್ರೇಕಿಂಗ್ ನ್ಯೂಸ್
06-06-22 09:58 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 6: ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬೆನ್ನತ್ತಿ ನ್ಯಾಯ ಕೊಡಿಸಬೇಕಾದ ಪೊಲೀಸ್ ಅಧಿಕಾರಿಯ ವಿರುದ್ಧ ಆತನ
ಪತ್ನಿಯೇ ಪೊಲೀಸ್ ದೂರು ನೀಡಿದ್ದು, 13 ವರ್ಷದ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಬೆಂಗಳೂರಿನ ಜೆಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಹಿಳೆ ಜೆಸಿ ನಗರ ಠಾಣೆ ವ್ಯಾಪ್ತಿಯಲ್ಲಿ ವಾಸವಿದ್ದು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಆಗಿರುವ ತನ್ನ ಗಂಡನ ವಿರುದ್ಧ ದೂರು ನೀಡಿದ್ದಾರೆ. ವಿಚಿತ್ರ ಅಂದರೆ, ಆರೋಪಿ ಪೊಲೀಸ್ ಅಧಿಕಾರಿ ದೂರು ನೀಡಿರುವ ಮಹಿಳೆಯ ಎರಡನೇ ಗಂಡನಾಗಿದ್ದಾನೆ. ಸದ್ಯಕ್ಕೆ ಆರೋಪಿ ಎಸೈ ವಿರುದ್ಧ ಪೋಕ್ಸೋ ಮತ್ತು ಅತ್ಯಾಚಾರ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದಲ್ಲದೆ, ತನ್ನ ಜೊತೆಗೂ ಅನೈಸರ್ಗಿಕ ಲೈಂಗಿಕ ಚಟುವಟಿಕೆ ನಡೆಸಲು ಒತ್ತಾಯ ಮಾಡುತ್ತಾನೆಂದು ಮಹಿಳೆ ದೂರಿದ್ದಾರೆ.
ಮಹಿಳೆಗೆ ಈ ಹಿಂದೆ ಬೇರೆ ಮದುವೆಯಾಗಿದ್ದು, ಮೊದಲ ಪತಿ ಕಿರುಕುಳ ನೀಡುತ್ತಿದ್ದ ಬಗ್ಗೆ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಠಾಣೆಯಲ್ಲಿ ಹೇಳಿಕೆಯನ್ನು ದಾಖಲಿಸಲು ಹೋಗಿದ್ದಾಗ, ಅಲ್ಲಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬ ಪರಿಚಯ ಆಗಿದ್ದ. ಪರಿಚಯ ಸ್ನೇಹಕ್ಕೆ ತಿರುಗಿದ್ದು ಮಹಿಳೆಗೆ ಮೊದಲ ಪತಿಯಿಂದ ವಿಚ್ಚೇದನ ಸಿಕ್ಕಿದ ಬಳಿಕ ಪೊಲೀಸ್ ಅಧಿಕಾರಿಯೇ ಈಕೆಯನ್ನು ಮದುವೆಯಾಗಿದ್ದ. ಪೊಲೀಸ್ ಅಧಿಕಾರಿಯೂ ಮೊದಲ ಪತ್ನಿಯಿಂದ ವಿಚ್ಚೇದನ ಪಡೆದಿದ್ದ ಕಾರಣ, ಇಬ್ಬರೂ ಜೊತೆಯಾಗಿದ್ದರು.
ಮಹಿಳೆಗೆ ಮೊದಲ ಪತಿಯ ಜೊತೆಗಿನ ಜೀವನದಲ್ಲಿ ಹೆಣ್ಣು ಮಗುವಾಗಿದ್ದು, ಈಗ ಆಕೆಗೆ 13 ವರ್ಷ ತುಂಬಿದೆ. ಜೊತೆಗೆ, ಮಹಿಳೆ ಇನ್ನೊಬ್ಬ ಸ್ವಂತ ತಂಗಿಯನ್ನೂ ಹೊಂದಿದ್ದಾಳೆ. ಕಾಮುಕ ಪೊಲೀಸ್ ಅಧಿಕಾರಿ 13 ವರ್ಷದ ಮಗಳು ಮತ್ತು ಪತ್ನಿಯ ತಂಗಿಯ ಮೇಲೆ ಕಣ್ಣು ಹಾಕಿದ್ದು, ಪತ್ನಿಯ ಕಣ್ಣು ತಪ್ಪಿಸಿ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಸರಿಯಾಗಿಯೇ ಇದ್ದ ಪತಿ, ಈಗ ವಿಕೃತ ಕಾಮ ಪೂರೈಸಿಕೊಳ್ಳಲು ಮುಂದಾಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
Bangalore Police inspector alleged of raping his 13-year-old daughter, wife files complaint at J J Nagar Police Station. The wife who has lodged a complaint against the inspector is said to be his second wife.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm