ಬ್ರೇಕಿಂಗ್ ನ್ಯೂಸ್
08-06-22 02:49 pm Mangalore Correspondent ಕ್ರೈಂ
ಮಂಗಳೂರು, ಜೂನ್ 8: ಬೆಂಗಳೂರಿನಿಂದ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಯುವತಿಗೆ ಕಿರುಕುಳ ನೀಡಿದ ಘಟನೆ ನಡೆದಿದ್ದು, ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಮ್ಮದ್ ಮುಸ್ತಫಾ ಬಿ.ಸಿ.ರೋಡ್ ಎಂದು ಗುರುತಿಸಲಾಗಿದೆ.
ಜೂನ್ 6ರಂದು ರಾತ್ರಿ ಶರ್ಲಿನ್ ಮಾರ್ತಾ ಎಂಬ ಯುವತಿ ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸಿನಲ್ಲಿ ಬಂದಿದ್ದು, ಬೆಳಗ್ಗೆ 5 ಗಂಟೆಗೆ ಬಸ್ ತಲುಪುತ್ತಿದ್ದಾಗ ಮಹಮ್ಮದ್ ಮುಸ್ತಫಾ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಯುವತಿ ಸಹ ಪ್ರಯಾಣಿಕರಲ್ಲಿ ತಿಳಿಸಿದ್ದು, ಕೂಡಲೇ ಇತರ ಪ್ರಯಾಣಿಕರು ಪ್ರಶ್ನೆ ಮಾಡಿದ್ದಾರೆ. ಆದರೆ, ಇತರ ಪ್ರಯಾಣಿಕರಲ್ಲಿ ನೀವೇನು ಮಾಡುತ್ತೀರಿ ಎಂದು ಜೋರು ದನಿಯಲ್ಲಿ ಮಾತನಾಡಿ ಒರಟಾಗಿ ವರ್ತಿಸಿದ್ದಾನೆ.
ವಾಗ್ವಾದ ನಡೆಯುತ್ತಿರುವಾಗಲೇ ಬಸ್ ಮಂಗಳೂರಿನ ಪಂಪ್ವೆಲ್ ತಲುಪಿದ್ದು, ಅಲ್ಲಿ ಬಸ್ ನಿಲ್ಲುತ್ತಿದ್ದಂತೆ ಆರೋಪಿ ಯುವಕ ಇಳಿದು ತಪ್ಪಿಸಿಕೊಂಡಿದ್ದ. ಯುವತಿ ಯಾವುದೋ ಕಂಪನಿಯಲ್ಲಿ ಇಂಟರ್ವ್ಯೂ ಇದ್ದ ಕಾರಣಕ್ಕೆ ಮಂಗಳೂರಿಗೆ ಬಂದಿದ್ದಳು. ಇಂಟರ್ವ್ಯೂ ಮುಗಿಸಿದ ಬಳಿಕ ಜೂನ್ 7ರಂದು ಸಂಜೆ ಕಂಕನಾಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದು ಐಪಿಸಿ 354 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
Mangalore Man arrested for sexually harassing girl in Bus by Kankandy police. The arrested has been identified as Mohammad Mustaffa.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm