ಬ್ರೇಕಿಂಗ್ ನ್ಯೂಸ್
08-06-22 10:33 pm Bengalore Correspondent ಕ್ರೈಂ
ಬೆಂಗಳೂರು, ಜೂನ್ 8 : ಕಿಡ್ನ್ಯಾಪ್ ಆಗಿದ್ದ ಮಗುವನ್ನು ಕೆಲವೇ ಗಂಟೆಗಳಲ್ಲಿ ಬೆಂಗಳೂರಿನ ಹೆಣ್ಣೂರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.
ಜೂನ್ 7 ರಂದು ಸಂಜೆ ವೇಳೆಗೆ 11 ವರ್ಷದ ಮಗು ಹೆಣ್ಣೂರಿನಲ್ಲಿ ಕಿಡ್ನ್ಯಾಪ್ ಆಗಿತ್ತು. ಕಿಡ್ನಾಪ್ ಆಗಿದ್ದ ಮಗು ಹೊರಮಾವು ನಿವಾಸಿಯಾಗಿರುವ ಬಿಎಂಟಿಸಿ ಚಾಲಕ ಸುಭಾಷ್ ಎಂಬುವವರ ಪುತ್ರನಾಗಿದ್ದು ಅಪಹರಣಕಾರರು 50 ಲಕ್ಷ ಬೇಡಿಕೆ ಇಟ್ಟಿದ್ದರು.
ಆರೋಪಿಗಳು ಕರೆ ಮಾಡಿ ಸುಮಾರು 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರಿಂದ ಪೋಷಕರು ರಾತ್ರಿ 9 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ನಂಬರ್ ಟ್ರೇಸ್ ಮಾಡಿದ್ದರು.
ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳ ಫೋನ್ ನಂಬರ್ ಹೆಣ್ಣೂರು ಠಾಣೆ ಪೊಲೀಸರು ತಕ್ಷಣ ಟ್ರೇಸ್ ಮಾಡಿದ್ದಾರೆ. ಈ ವೇಳೆ ಜಿಗಣಿ ಬಳಿ ಫಾರ್ಮ್ಹೌಸ್ನಲ್ಲಿ ಮಗು ಜತೆ ಆರೋಪಿಗಳು ಇದ್ದರು. ಸಿನಿಮೀಯ ರೀತಿ ಕಾಂಪೌಂಡ್ ಹಾರಿ ಒಳನುಗ್ಗಿ ಮಗುವನ್ನು ರಕ್ಷಣೆ ಮಾಡಿದ್ದು, ನೇಪಾಳ ಮೂಲದ ಆರೋಪಿಯನ್ನ ಬಂಧಿಸಿದ್ದಾರೆ. ಮಹಿಳೆಯೊಬ್ಬರು ಮಗುವನ್ನು ಅಪಹರಿಸಿ ನೇಪಾಳ ಮೂಲದ ವ್ಯಕ್ತಿಗೆ ನೀಡಿದ್ದಾಳೆ ಎಂದು ಹೇಳಲಾಗುತ್ತಿದೆ. ಸದ್ಯ ಮಗು ಕಿಡ್ನ್ಯಾಪ್ ಮಾಡಿದ್ದ ಮಹಿಳೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಹೊರಮಾವು ನಿವಾಸಿ ಸುಭಾಷ್ ಅವರ ಮಗ ಐದನೇ ಕ್ಲಾಸ್ ಓದುತ್ತಿದ್ದ. ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗಲೇ ಮಹಿಳೆ ಬಾಲಕನನ್ನು ಅಪಹರಿಸಿದ್ದಳು.
11 year old boy kidnapped, demand 50 lakhs as ransom, police nab accused within hours.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm