ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm