ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm