ಬ್ರೇಕಿಂಗ್ ನ್ಯೂಸ್
09-06-22 09:20 pm HK News Desk ಕ್ರೈಂ
ಕಾರವಾರ, ಜೂನ್ 9: ಮುಂಬೈನಿಂದ ಮಂಗಳೂರಿಗೆ ರೈಲಿನಲ್ಲಿ ಹವಾಲಾ ರೂಪದಲ್ಲಿ ತರುತ್ತಿದ್ದ ಎರಡು ಕೋಟಿ ರೂ. ನಗದನ್ನು ರೈಲ್ವೇ ಪೊಲೀಸರು ಕಾರವಾರದಲ್ಲಿ ಪತ್ತೆ ಮಾಡಿದ್ದಾರೆ.
ರೈಲು ಸಂಖ್ಯೆ - 12133 ಮುಂಬೈ ಛತ್ರಪತಿ ಶಿವಾಜಿ ಟರ್ಮಿನಲ್- ಮಂಗಳೂರು ಜಂಕ್ಷನ್ ಎಕ್ಸ್ಪ್ರೆಸ್ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಕಾರಣಕ್ಕೆ ವ್ಯಕ್ತಿಯನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ರೈಲ್ವೇ ಟಿಕೆಟ್ ಪರೀಕ್ಷಕರು ವಿಚಾರಿಸಿದರೂ ಸರಿಯಾಗಿ ಉತ್ತರಿಸದೇ ಇದ್ದಾಗ ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲು ಕಾರವಾರ ನಿಲ್ದಾಣಕ್ಕೆ ಬಂದಾಗ ವ್ಯಕ್ತಿಯ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದ್ದು, ಅದರಲ್ಲಿ ಬರೋಬ್ಬರಿ 2 ಕೋಟಿ ರೂ. ಭಾರತೀಯ ಕರೆನ್ಸಿ ನೋಟುಗಳು ಪತ್ತೆಯಾಗಿವೆ.
ಪ್ರಕರಣಕ್ಕೆ ಸಂಬಂಧಿಸಿ 22 ವರ್ಷದ ಚೇನ್ ಸಿಂಗ್ ಎಂಬಾತನನ್ನು ಬಂಧಿಸಲಾಗಿದ್ದು, ಈತ ರಾಜಸ್ಥಾನದ ಜಲೋರ್ ನಗರದ ನಿವಾಸಿ ಎಂದು ಪೊಲೀಸರು ಗುರುತಿಸಿದ್ದಾರೆ. ಬ್ಯಾಗ್ ತೆರೆಯಲು ಹೇಳಿದಾಗ, ಮೊದಲು ನಿರಾಕರಿಸಿದ್ದು ನಂತರ ಬ್ಯಾಗಿನಲ್ಲಿ ದುಡ್ಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ, ಮುಂಬೈನ ಭರತ್ ಭಾಯ್ ಅಲಿಯಾಸ್ ಪಿಂಟು ಎಂಬಾತನ ಬಳಿ ರೂ.15,000 ಮಾಸಿಕ ವೇತನಕ್ಕೆ ಕೆಲಸ ಮಾಡುತ್ತಿದ್ದು, ಹಣವನ್ನು ಮಂಗಳೂರಿನ ರಾಜ್ ಎನ್ನುವವರಿಗೆ ತಲುಪಿಸಲು ಒಯ್ಯುತ್ತಿದ್ದೇನೆ ಎಂದು ತಿಳಿಸಿದ್ದಾನೆ.
ಜಪ್ತಿಪಡಿಸಿದ ರೂ. 2 ಕೋಟಿ ರೂಪಾಯಿ ನಗದನ್ನು ಅಗತ್ಯ ಕ್ರಮಕ್ಕಾಗಿ ಆದಾಯ ತೆರಿಗೆ ಇಲಾಖೆಯ ನಿರ್ದೇಶನದಂತೆ ಕಾರವಾರ ಗ್ರಾಮೀಣ ಠಾಣೆಗೆ ಹಸ್ತಾಂತರಿಸಲಾಗಿದೆ. ಪೊಲೀಸರು ಅದೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಅದೇ ಠಾಣೆಗೆ ಹಸ್ತಾಂತರ ಮಾಡಲಾಗಿದೆ.
Karwar Hawala via train from Mumbai to Mangalore, two crores money seized, youth arrested. The arrested has been identified as Chin Sing (22).
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm