ಬ್ರೇಕಿಂಗ್ ನ್ಯೂಸ್
10-06-22 08:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿದರೆ, ಕೆಲವೇ ದಿನಗಳಲ್ಲಿ ಡಬಲ್ ಆಗುತ್ತದೆ, ಗರಿಷ್ಠ ಲಾಭ ಬರುತ್ತದೆಯೆಂದು ಹೇಳಿ ಮಹಿಳೆ ಮತ್ತು ಆಕೆಯ ಮಗಳನ್ನು ಯಾಮಾರಿಸಿ 45 ಲಕ್ಷದ 50 ಸಾವಿರ ರೂಪಾಯಿ ಪೀಕಿಸಿದ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರೀನ್ ವಿಲ್ ವಾಸ್, ಲಾವಣ್ಯ, ರೊನಾಲ್ಡ್ ಮತ್ತು ಮೆಲಿಸಾ ಪಿರೇರಾ ವಂಚನೆ ಎಸಗಿದ ಆರೋಪಿಗಳು ಎಂಬುದಾಗಿ ತಾಯಿ, ಮಗಳು ದೂರಿನಲ್ಲಿ ತಿಳಿಸಿದ್ದಾರೆ. ಮದುವೆ ಸಮಾರಂಭ ಒಂದರಲ್ಲಿ ಮೆಲಿಸಾ ಪಿರೇರಾ ಭೇಟಿಯಾಗಿದ್ದು, ಅದೇ ಸಂದರ್ಭದಲ್ಲಿ ಗ್ರೀನ್ ವಿಲ್ ವಾಸ್ ನನ್ನು ಪರಿಚಯ ಮಾಡಿಸಿದ್ದರು.
ಗ್ರೀನ್ ವಿಲ್ ಮುಂಬೈ ನಗರದ ಮೀರಾ ರೋಡ್ ನಲ್ಲಿ ಗೋಲ್ಡ್ ಹಿಲ್ ಸ್ಟಾಕ್ ಟ್ರೇಡಿಂಗ್ ಸೆಂಟರಿನಲ್ಲಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದಾರೆ. ಅಲ್ಲದೆ, ಸದ್ಯದಲ್ಲೇ ಗೋಲ್ಡ್ ಹಿಲ್ ಸ್ಟಾಕ್ ಎಕ್ಸ್ ಚೇಂಜ್ ಕಚೇರಿ ಮಂಗಳೂರಿನಲ್ಲಿ ಆರಂಭವಾಗಲಿದ್ದು ಅದರ ಸಂಪೂರ್ಣ ಹೊಣೆಯನ್ನು ತಾನೇ ವಹಿಸುವುದಾಗಿ ತಿಳಿಸಿದ್ದಾರೆ.
ಆರೋಪಿಗಳು ಸೇರಿಕೊಂಡು ಗೋಲ್ಡ್ ಹಿಲ್ ಬಗ್ಗೆ ವಿವರಣೆ ನೀಡಿದ್ದು, ಅದರಲ್ಲಿ ಹಣ ಹೂಡಿಕೆ ಮಾಡಿದರೆ ಕೇವಲ 37 ದಿನಗಳಲ್ಲಿ 30 ಶೇಕಡಾ ಹಣ ಬಡ್ಡಿ ರೂಪದಲ್ಲಿ ತಿರುಗಿ ಬರುತ್ತದೆ ಎಂದು ಹೇಳಿದ್ದಾರೆ. ಅದರಂತೆ, ಬಣ್ಣನೆಯ ಮಾತುಗಳನ್ನು ನಂಬಿದ ಮಹಿಳೆಯ ಪುತ್ರಿ ತಾನು ದುಡಿದು ಕೂಡಿಟ್ಟಿದ್ದ 45,50,000 ರೂಪಾಯಿ ಹಣವನ್ನು 2020ರಲ್ಲಿ ವಿವಿಧ ಸಂದರ್ಭಗಳಲ್ಲಿ ಗೋಲ್ಡ್ ಹಿಲ್ ಹೆಸರಲ್ಲಿ ಹೂಡಿಕೆ ಮಾಡಿದ್ದಾರೆ.
ಗ್ರೀನ್ ವಿಲ್ ವಾಸ್ ಸೂಚಿಸಿದ ಬ್ಯಾಂಕು ಖಾತೆಗಳಿಗೆ ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆನಂತರ ಯಾವುದೇ ಬಡ್ಡಿ ಹಣವನ್ನು ನೀಡಲಿಲ್ಲ. ಬಡ್ಡಿ ಬದಲು ಅಸಲನ್ನಾದರೂ ಕೊಡಿ ಎಂದು ದುಂಬಾಲು ಬಿದ್ದರೂ, ಹಣವನ್ನು ಹಿಂತಿರುಗಿಸದೆ ಮೋಸ ಮಾಡಿದ್ದಾರೆ. ಇವರ ಮೋಸದ ಜಾಲದಲ್ಲಿ ಆರೋಪಿಗಳು ಸಹಕಾರ ನೀಡಿದ್ದು, ವಂಚನೆಯಲ್ಲಿ ಶಾಮೀಲಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ದೂರು ದಾಖಲಿಸಿದ್ದರೂ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಜರುಗಿಸಿಲ್ಲ.
A 57-year-old woman has filed a police complaint against six persons for cheating her and her daughter of Rs 45,50,000 by asking them to invest in the name of Stock Trading Goldhil. The accused are Grenville Vas, Lavanya, Ronald and Melissa Pereira.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm