ಬ್ರೇಕಿಂಗ್ ನ್ಯೂಸ್
10-06-22 08:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿದರೆ, ಕೆಲವೇ ದಿನಗಳಲ್ಲಿ ಡಬಲ್ ಆಗುತ್ತದೆ, ಗರಿಷ್ಠ ಲಾಭ ಬರುತ್ತದೆಯೆಂದು ಹೇಳಿ ಮಹಿಳೆ ಮತ್ತು ಆಕೆಯ ಮಗಳನ್ನು ಯಾಮಾರಿಸಿ 45 ಲಕ್ಷದ 50 ಸಾವಿರ ರೂಪಾಯಿ ಪೀಕಿಸಿದ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರೀನ್ ವಿಲ್ ವಾಸ್, ಲಾವಣ್ಯ, ರೊನಾಲ್ಡ್ ಮತ್ತು ಮೆಲಿಸಾ ಪಿರೇರಾ ವಂಚನೆ ಎಸಗಿದ ಆರೋಪಿಗಳು ಎಂಬುದಾಗಿ ತಾಯಿ, ಮಗಳು ದೂರಿನಲ್ಲಿ ತಿಳಿಸಿದ್ದಾರೆ. ಮದುವೆ ಸಮಾರಂಭ ಒಂದರಲ್ಲಿ ಮೆಲಿಸಾ ಪಿರೇರಾ ಭೇಟಿಯಾಗಿದ್ದು, ಅದೇ ಸಂದರ್ಭದಲ್ಲಿ ಗ್ರೀನ್ ವಿಲ್ ವಾಸ್ ನನ್ನು ಪರಿಚಯ ಮಾಡಿಸಿದ್ದರು.
ಗ್ರೀನ್ ವಿಲ್ ಮುಂಬೈ ನಗರದ ಮೀರಾ ರೋಡ್ ನಲ್ಲಿ ಗೋಲ್ಡ್ ಹಿಲ್ ಸ್ಟಾಕ್ ಟ್ರೇಡಿಂಗ್ ಸೆಂಟರಿನಲ್ಲಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದಾರೆ. ಅಲ್ಲದೆ, ಸದ್ಯದಲ್ಲೇ ಗೋಲ್ಡ್ ಹಿಲ್ ಸ್ಟಾಕ್ ಎಕ್ಸ್ ಚೇಂಜ್ ಕಚೇರಿ ಮಂಗಳೂರಿನಲ್ಲಿ ಆರಂಭವಾಗಲಿದ್ದು ಅದರ ಸಂಪೂರ್ಣ ಹೊಣೆಯನ್ನು ತಾನೇ ವಹಿಸುವುದಾಗಿ ತಿಳಿಸಿದ್ದಾರೆ.
ಆರೋಪಿಗಳು ಸೇರಿಕೊಂಡು ಗೋಲ್ಡ್ ಹಿಲ್ ಬಗ್ಗೆ ವಿವರಣೆ ನೀಡಿದ್ದು, ಅದರಲ್ಲಿ ಹಣ ಹೂಡಿಕೆ ಮಾಡಿದರೆ ಕೇವಲ 37 ದಿನಗಳಲ್ಲಿ 30 ಶೇಕಡಾ ಹಣ ಬಡ್ಡಿ ರೂಪದಲ್ಲಿ ತಿರುಗಿ ಬರುತ್ತದೆ ಎಂದು ಹೇಳಿದ್ದಾರೆ. ಅದರಂತೆ, ಬಣ್ಣನೆಯ ಮಾತುಗಳನ್ನು ನಂಬಿದ ಮಹಿಳೆಯ ಪುತ್ರಿ ತಾನು ದುಡಿದು ಕೂಡಿಟ್ಟಿದ್ದ 45,50,000 ರೂಪಾಯಿ ಹಣವನ್ನು 2020ರಲ್ಲಿ ವಿವಿಧ ಸಂದರ್ಭಗಳಲ್ಲಿ ಗೋಲ್ಡ್ ಹಿಲ್ ಹೆಸರಲ್ಲಿ ಹೂಡಿಕೆ ಮಾಡಿದ್ದಾರೆ.
ಗ್ರೀನ್ ವಿಲ್ ವಾಸ್ ಸೂಚಿಸಿದ ಬ್ಯಾಂಕು ಖಾತೆಗಳಿಗೆ ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆನಂತರ ಯಾವುದೇ ಬಡ್ಡಿ ಹಣವನ್ನು ನೀಡಲಿಲ್ಲ. ಬಡ್ಡಿ ಬದಲು ಅಸಲನ್ನಾದರೂ ಕೊಡಿ ಎಂದು ದುಂಬಾಲು ಬಿದ್ದರೂ, ಹಣವನ್ನು ಹಿಂತಿರುಗಿಸದೆ ಮೋಸ ಮಾಡಿದ್ದಾರೆ. ಇವರ ಮೋಸದ ಜಾಲದಲ್ಲಿ ಆರೋಪಿಗಳು ಸಹಕಾರ ನೀಡಿದ್ದು, ವಂಚನೆಯಲ್ಲಿ ಶಾಮೀಲಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ದೂರು ದಾಖಲಿಸಿದ್ದರೂ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಜರುಗಿಸಿಲ್ಲ.
A 57-year-old woman has filed a police complaint against six persons for cheating her and her daughter of Rs 45,50,000 by asking them to invest in the name of Stock Trading Goldhil. The accused are Grenville Vas, Lavanya, Ronald and Melissa Pereira.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm