ಬ್ರೇಕಿಂಗ್ ನ್ಯೂಸ್
10-06-22 08:52 pm Mangalore Correspondent ಕ್ರೈಂ
ಮಂಗಳೂರು, ಜೂನ್ 10: ಷೇರು ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡಿದರೆ, ಕೆಲವೇ ದಿನಗಳಲ್ಲಿ ಡಬಲ್ ಆಗುತ್ತದೆ, ಗರಿಷ್ಠ ಲಾಭ ಬರುತ್ತದೆಯೆಂದು ಹೇಳಿ ಮಹಿಳೆ ಮತ್ತು ಆಕೆಯ ಮಗಳನ್ನು ಯಾಮಾರಿಸಿ 45 ಲಕ್ಷದ 50 ಸಾವಿರ ರೂಪಾಯಿ ಪೀಕಿಸಿದ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗ್ರೀನ್ ವಿಲ್ ವಾಸ್, ಲಾವಣ್ಯ, ರೊನಾಲ್ಡ್ ಮತ್ತು ಮೆಲಿಸಾ ಪಿರೇರಾ ವಂಚನೆ ಎಸಗಿದ ಆರೋಪಿಗಳು ಎಂಬುದಾಗಿ ತಾಯಿ, ಮಗಳು ದೂರಿನಲ್ಲಿ ತಿಳಿಸಿದ್ದಾರೆ. ಮದುವೆ ಸಮಾರಂಭ ಒಂದರಲ್ಲಿ ಮೆಲಿಸಾ ಪಿರೇರಾ ಭೇಟಿಯಾಗಿದ್ದು, ಅದೇ ಸಂದರ್ಭದಲ್ಲಿ ಗ್ರೀನ್ ವಿಲ್ ವಾಸ್ ನನ್ನು ಪರಿಚಯ ಮಾಡಿಸಿದ್ದರು.
ಗ್ರೀನ್ ವಿಲ್ ಮುಂಬೈ ನಗರದ ಮೀರಾ ರೋಡ್ ನಲ್ಲಿ ಗೋಲ್ಡ್ ಹಿಲ್ ಸ್ಟಾಕ್ ಟ್ರೇಡಿಂಗ್ ಸೆಂಟರಿನಲ್ಲಿ ಕೆಲಸ ಮಾಡುತ್ತಿರುವುದಾಗಿ ನಂಬಿಸಿದ್ದಾರೆ. ಅಲ್ಲದೆ, ಸದ್ಯದಲ್ಲೇ ಗೋಲ್ಡ್ ಹಿಲ್ ಸ್ಟಾಕ್ ಎಕ್ಸ್ ಚೇಂಜ್ ಕಚೇರಿ ಮಂಗಳೂರಿನಲ್ಲಿ ಆರಂಭವಾಗಲಿದ್ದು ಅದರ ಸಂಪೂರ್ಣ ಹೊಣೆಯನ್ನು ತಾನೇ ವಹಿಸುವುದಾಗಿ ತಿಳಿಸಿದ್ದಾರೆ.
ಆರೋಪಿಗಳು ಸೇರಿಕೊಂಡು ಗೋಲ್ಡ್ ಹಿಲ್ ಬಗ್ಗೆ ವಿವರಣೆ ನೀಡಿದ್ದು, ಅದರಲ್ಲಿ ಹಣ ಹೂಡಿಕೆ ಮಾಡಿದರೆ ಕೇವಲ 37 ದಿನಗಳಲ್ಲಿ 30 ಶೇಕಡಾ ಹಣ ಬಡ್ಡಿ ರೂಪದಲ್ಲಿ ತಿರುಗಿ ಬರುತ್ತದೆ ಎಂದು ಹೇಳಿದ್ದಾರೆ. ಅದರಂತೆ, ಬಣ್ಣನೆಯ ಮಾತುಗಳನ್ನು ನಂಬಿದ ಮಹಿಳೆಯ ಪುತ್ರಿ ತಾನು ದುಡಿದು ಕೂಡಿಟ್ಟಿದ್ದ 45,50,000 ರೂಪಾಯಿ ಹಣವನ್ನು 2020ರಲ್ಲಿ ವಿವಿಧ ಸಂದರ್ಭಗಳಲ್ಲಿ ಗೋಲ್ಡ್ ಹಿಲ್ ಹೆಸರಲ್ಲಿ ಹೂಡಿಕೆ ಮಾಡಿದ್ದಾರೆ.
ಗ್ರೀನ್ ವಿಲ್ ವಾಸ್ ಸೂಚಿಸಿದ ಬ್ಯಾಂಕು ಖಾತೆಗಳಿಗೆ ಹಣವನ್ನು ಹೂಡಿಕೆ ಮಾಡಿದ್ದರು. ಆದರೆ ಆನಂತರ ಯಾವುದೇ ಬಡ್ಡಿ ಹಣವನ್ನು ನೀಡಲಿಲ್ಲ. ಬಡ್ಡಿ ಬದಲು ಅಸಲನ್ನಾದರೂ ಕೊಡಿ ಎಂದು ದುಂಬಾಲು ಬಿದ್ದರೂ, ಹಣವನ್ನು ಹಿಂತಿರುಗಿಸದೆ ಮೋಸ ಮಾಡಿದ್ದಾರೆ. ಇವರ ಮೋಸದ ಜಾಲದಲ್ಲಿ ಆರೋಪಿಗಳು ಸಹಕಾರ ನೀಡಿದ್ದು, ವಂಚನೆಯಲ್ಲಿ ಶಾಮೀಲಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ದೂರು ದಾಖಲಿಸಿದ್ದರೂ, ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಜರುಗಿಸಿಲ್ಲ.
A 57-year-old woman has filed a police complaint against six persons for cheating her and her daughter of Rs 45,50,000 by asking them to invest in the name of Stock Trading Goldhil. The accused are Grenville Vas, Lavanya, Ronald and Melissa Pereira.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm