ಬ್ರೇಕಿಂಗ್ ನ್ಯೂಸ್
13-06-22 10:47 am HK News Desk ಕ್ರೈಂ
ಬೆಂಗಳೂರು, ಜೂನ್ 13 : ಹಲಸೂರು ಬಳಿಯ ಫೈವ್ ಸ್ಟಾರ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು ತಡರಾತ್ರಿ ರೇವ್ ಪಾರ್ಟಿ ನಡೆಸುತ್ತಿದ್ದ 50ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ನಟ ಸಿದ್ಧಾಂತ ಕಪೂರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಪಾರ್ಟಿಯಲ್ಲಿ ರಾಜಕೀಯ ನಾಯಕರ ಮಕ್ಕಳು ಕೂಡ ಪಾಲ್ಗೊಂಡಿದ್ದರು ಎನ್ನುವ ಮಾಹಿತಿಯಿದೆ.
ಹಲಸೂರು ಬಳಿಯ "ದಿ ಪಾರ್ಕ್" ಫೈವ್ ಸ್ಟಾರ್ ಹೋಟೆಲ್ ಮೇಲೆ ದಾಳಿಯಾಗಿದೆ. ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಅನುಮಾನ ಹಿನ್ನಲೆ ಪೊಲೀಸರು ದಾಳಿ ನಡೆಸಿದ್ದಾರೆ. ರಾತ್ರಿ 12 ಗಂಟೆ ಸುಮಾರಿಗೆ 25ಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದಾರೆ. 50ಕ್ಕೂ ಹೆಚ್ಚು ಯವಕ ಮತ್ತು ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಪರೀಕ್ಷೆಗೆ ರವಾನಿಸಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಹಲವರು ಡ್ರಗ್ ಸೇವನೆ ಮಾಡಿರೋದು ಧೃಡಪಟ್ಟಿದೆ ಎನ್ನುವ ಮಾಹಿತಿಗಳಿವೆ.



ರೇವ್ ಪಾರ್ಟಿಯಿಂದ ಬಾಲಿವುಡ್ ಹಿರಿಯ ನಟರೊಬ್ಬರ ಪುತ್ರ ಸಿದ್ಧಾಂತ ಕಪೂರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು ಆತ ಡ್ರಗ್ಸ್ ಸೇವನೆ ಮಾಡಿರುವುದು ದೃಢಪಟ್ಟಿದೆ. ಆತನನ್ನು ಹಲಸೂರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಸ್ಪಷ್ಟನೆ ನೀಡಿದ್ದಾರೆ.

ಬಾಲಿವುಟ್ ನಟನೂ ಆಗಿರುವ ಸಿದ್ಧಾಂತ ಕಪೂರ್, ಮುಂಬೈ ಮೂಲದ ಡಿಜೆಯೊಂದಿಗೆ ಪಾರ್ಟಿಗೆ ಬಂದಿದ್ದ ಎನ್ನಲಾಗುತ್ತಿದೆ. ಸಿದ್ಧಾಂತ್, ಬಾಲಿವುಡ್ ಹಿರಿಯ ನಟ ಶಕ್ತಿ ಕಪೂರ್ ಪುತ್ರನಾಗಿದ್ದು ಬೆಂಗಳೂರಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿ ಸಿಕ್ಕಿಬಿದ್ದಿದ್ದಾನೆ.
Actor Siddhanth Kapoor's brother Siddhanth Kapoor tested positive for drug usage in Bengaluru on Sunday night.He was one of the six people who consumed drugs at a rave party, the city police found during its raid.While new developments are still awaited, Kapoor now becomes the latest celebrity to be mired in a drug controversy.His father veteran actor Shakti Kapoor has reacted.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm