ಬ್ರೇಕಿಂಗ್ ನ್ಯೂಸ್
16-06-22 03:39 pm Mangalore Correspondent ಕ್ರೈಂ
ಬಂಟ್ವಾಳ, ಜೂನ್ 16: ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯೊಬ್ಬರ ಹೆಸರಲ್ಲಿ ನಕಲಿ ಸಹಿ ಮಾಡಿ ದೈಹಿಕ ಅರ್ಹತಾ ಪತ್ರ ನೀಡಿದ್ದ ಆರೋಪದಲ್ಲಿ ವಿಟ್ಲದ ಯುವಕನೊಬ್ಬ ಜೈಲುಪಾಲಾಗಿದ್ದಾನೆ.
ವಿಟ್ಲ ಸ್ಕೂಲ್ ರಸ್ತೆಯ ನಿವಾಸಿ ಶೇಖ್ ಫಿರೋಜ್ ಆದಂ(26) ವಿಟ್ಲ ಪೊಲೀಸರಿಗೆ ಸಿಕ್ಕಿಬಿದ್ದ ಜೈಲುಪಾಲಾದ ಯುವಕ. ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಡಾ.ವೇದಾವತಿ ಅವರು ನೀಡಿದ್ದ ದೂರಿನಂತೆ ವಿಟ್ಲ ಪೊಲೀಸರು ಕ್ರಮ ಜರುಗಿಸಿದ್ದಾರೆ. ತನ್ನ ಹೆಸರಲ್ಲಿ ಡುಪ್ಲಿಕೇಟ್ ಸೀಲ್ ಮತ್ತು ನಕಲಿ ಸಹಿಯನ್ನು ನೀಡಿದ್ದ ಪೋರ್ಜರಿ ದಾಖಲೆ ಪತ್ರದ ಬಗ್ಗೆ ವೈದ್ಯರು ದೂರು ನೀಡಿದ್ದರು.
ಇಸುಬು ಎಂಬ ವ್ಯಕ್ತಿಯೊಬ್ಬ ತನ್ನ ಡ್ರೈವಿಂಗ್ ಲೈಸನ್ಸ್ ನವೀಕರಣ ಮಾಡುವುದಕ್ಕಾಗಿ ವಿಟ್ಲದಲ್ಲಿರುವ ನೇಶನಲ್ ಡ್ರೈವಿಂಗ್ ಸ್ಕೂಲ್ ಗೆ ಅರ್ಜಿ ಸಲ್ಲಿಸಿದ್ದ. ಲೈಸನ್ಸ್ ನವೀಕರಣ ಮಾಡಲು ಫಿಟ್ನೆಸ್ ಸರ್ಟಿಫಿಕೇಟ್ ಬೇಕಾಗಿದ್ದರಿಂದ ಡ್ರೈವಿಂಗ್ ಸ್ಕೂಲ್ ನಲ್ಲಿ ಸಿಬಂದಿಯಾಗಿದ್ದ ಶೇಖ್ ಫಿರೋಜ್ ಆದಂ ತಾನೇ ಪೋರ್ಜರಿ ದಾಖಲೆಯನ್ನು ಸಿದ್ಧಪಡಿಸಿದ್ದ. ಡ್ರೈವಿಂಗ್ ಸ್ಕೂಲ್ ಕೇಂದ್ರವು ಆರೋಪಿ ಫಿರೋಜ್ ತಂದೆಗೆ ಸೇರಿದ್ದಾಗಿದ್ದು ಅಲ್ಲಿ ದಾಖಲೆ ಪತ್ರಗಳ ಕ್ರೋಡೀಕರಣ ಕೆಲಸವನ್ನು ಆತನೇ ಮಾಡುತ್ತಿದ್ದ.
ಆನಂತರ ಲೈಸನ್ಸ್ ನವೀಕರಣಕ್ಕಾಗಿ ಬಂಟ್ವಾಳ ಆರ್ ಟಿಓ ಕೇಂದ್ರಕ್ಕೆ ಅರ್ಜಿ ರವಾನೆಯಾಗಿತ್ತು. ಪರಿಶೀಲನೆ ನಡೆಸಿದ ಆರ್ ಟಿಓ ಇನ್ ಸ್ಪೆಕ್ಟರ್, ಫಿಟ್ನೆಸ್ ಸರ್ಟಿಫಿಕೇಟ್ ನಲ್ಲಿದ್ದ ಸಹಿಯ ಬಗ್ಗೆ ಸಂಶಯ ಬಂದು ಅದನ್ನು ವೈದ್ಯರ ಪರಿಶೀಲನೆಗೆ ಕಳಿಸಿದ್ದರು. ವೈದ್ಯರು ಚೆಕ್ ಮಾಡಿದಾಗ, ಅದು ತನ್ನದಲ್ಲ ಸಹಿ ಎಂದು ತಿಳಿದು ಸಹಿ ಪೋರ್ಜರಿಯಾಗಿರುವ ಸಂಶಯದಲ್ಲಿ ವಿಟ್ಲ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಇಸುಬುವನ್ನು ಕರೆಸಿ ಮಾಹಿತಿ ಪಡೆದಿದ್ದಾರೆ. ತಾನು ಡ್ರೈವಿಂಗ್ ಲೈಸನ್ಸ್ ನವೀಕರಣಕ್ಕೆ ಅರ್ಜಿ ಸಲ್ಲಿಸಿದ ಬಗ್ಗೆ ಮಾಹಿತಿ ನೀಡಿದ್ದ. ಡ್ರೈವಿಂಗ್ ಸ್ಕೂಲ್ ನಲ್ಲಿ ಸಿಬಂದಿಯನ್ನು ತನಿಖೆಗೆ ಒಳಪಡಿಸಿದಾಗ, ಆರೋಪಿ ಫಿರೋಜ್ ಆದಂ ಸಿಕ್ಕಿಬಿದ್ದಿದ್ದು ಆತನನ್ನು ಕೋರ್ಟಿಗೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
A person was arrested for forging the signature and stamp of a government doctor and attempting to cheat the authorities. The incident was reported under the Vittal police station. The arrested accused is identified as Sheik Firoz Adam (26), a resident of Vittal school road. The have arrested the accused acting on a complaint filed by Dr Vedavathi of Vittal community health center.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm