ಬ್ರೇಕಿಂಗ್ ನ್ಯೂಸ್
17-06-22 02:54 pm HK News Desk ಕ್ರೈಂ
ಹಾವೇರಿ, ಜೂನ್ 17 : ತುಂಗಾ ಮೇಲ್ದಂಡೆ ಯೋಜನೆಯ ಸಹಾಯಕ ಇಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ ನಡೆದಿದ್ದು ಅಕ್ರಮವಾಗಿ ಕೂಡಿಟ್ಟ ಕೋಟ್ಯಂತರ ಬೆಲೆಯ ಆಸ್ತಿಯನ್ನು ಪತ್ತೆ ಮಾಡಲಾಗಿದೆ. ರಾಣೇಬೆನ್ನೂರು ವಿಭಾಗದ ಅಪ್ಪರ್ ತುಂಗಾ ಸಹಾಯಕ ಇಂಜಿನಿಯರ್ ಚಂದ್ರಪ್ಪ ಓಲೇಕಾರ ಭ್ರಷ್ಟಾಚಾರದಿಂದ ಅಪಾರ ಪ್ರಮಾಣದ ಆಸ್ತಿ ಮಾಡಿದ್ದಾನೆ.
ದಾಳಿ ವೇಳೆ 13 ಲಕ್ಷ 39 ಸಾವಿರ ರೂ. ನಗದು ಹಣ, 400 ಗ್ರಾಂ ಬಂಗಾರ, 1600 ಗ್ರಾಂ ಬೆಳ್ಳಿ ಪತ್ತೆಯಾಗಿದೆ. ಅತ್ತೆ, ಹೆಂಡತಿ ಹಾಗೂ ತನ್ನ ಹೆಸರಲ್ಲಿ ಸೇರಿ 5 ಸೈಟು ಖರೀದಿಸಿದ್ದು ಪ್ರತಿಯೊಂದರ ಮೌಲ್ಯ 40-50 ಲಕ್ಷ ಇದೆ. ರಾಣೇಬೆನ್ನೂರು ತಾಲೂಕಿನ ಗುಡುಗೂರು-ಮೈದೂರು ಗ್ರಾಮದ ಮಧ್ಯೆ 25 ಎಕರೆ ಜಮೀನು ಖರೀದಿಸಿದ್ದಾನೆ. ಇದರ ಮೌಲ್ಯ ಕೋಟಿಗೂ ಮಿಕ್ಕಿದೆ.
ರಾಣೇಬೆನ್ನೂರಿನ ನಗರ ಸಿದ್ದಾರೋಡ ಕಾಲೋನಿ ಹಾಗೂ ಆಣೂರು ಎಂಬಲ್ಲಿ ಎರಡೆರಡು ಮನೆ ಹೊಂದಿದ್ದು ಅಲ್ಲಿಗೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ. ಹಣ, ಬಂಗಾರದ ಆಭರಣ ಹಾಗೂ ಆಸ್ತಿ ನೋಡಿ ಎಸಿಬಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಎಸಿಬಿ ಡಿವೈಎಸ್ಪಿ ಗೋಪಿ ನೇತೃತ್ವದಲ್ಲಿ 25 ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದ್ವಿತೀಯ ದರ್ಜೆ ಸಹಾಯಕನಲ್ಲಿ ಕೋಟ್ಯಂತರ ಆಸ್ತಿ
ಚಿಕ್ಕಮಗಳೂರಿನಲ್ಲಿ ಎಸಿಬಿ ಅಧಿಕಾರಿಗಳ ಬೇಟೆ ನಡೆದಿದ್ದು ದ್ವಿತೀಯ ದರ್ಜೆ ಸಹಾಯಕ ತಿಮ್ಮಯ್ಯ ಎಂಬ ಅಧಿಕಾರಿಯ ಮನೆಯಲ್ಲಿ ಕೋಟ್ಯಂತರ ಆಸ್ತಿ ಪತ್ತೆಯಾಗಿದೆ. ಡಿವೈಎಸ್ಪಿ ಅನಿಲ್ ರಾಥೋಡ್ ನೇತೃತ್ವದಲ್ಲಿ ಏಕಕಾಲದಲ್ಲಿ ಮನೆ, ಕಚೇರಿ, ಪೂರ್ವಿಕರ ನಿವಾಸದ ಮೇಲೂ ದಾಳಿಯಾಗಿದೆ. ಕಡೂರು ಪಟ್ಟಣದಲ್ಲಿ ಮೂರು ನಿವೇಶನ, 8 ಗುಂಟೆ ಜಮೀನು, ಬಸೂರು ಸಮೀಪ 80 ಲಕ್ಷ ಮೌಲ್ಯದ 20 ಎಕ್ರೆ ತೋಟ, ಬಸೂರು ನಲ್ಲಿ 5 ಎಕ್ರೆ ಖಾಲಿ ನಿವೇಶನ, 50 ಸಾವಿರ ನಗದು, 100 ಗ್ರಾಂ ಬೆಳ್ಳಿ, 250 ಗ್ರಾಂ ಚಿನ್ನ ಪತ್ತೆ ಮಾಡಲಾಗಿದೆ.
ಸ್ನಾನದ ಕೊಠಡಿಯಲ್ಲೂ ಐದು ಲಕ್ಷ ನಗದು ಪತ್ತೆ
ಬೆಳಗಾವಿಯ ಪಿಡಬ್ಲ್ಯುಡಿ ಅಧೀಕ್ಷಕ ಇಂಜಿನಿಯರ್ ಬಿವೈ ಪವಾರ್ ಎಂಬ ಭ್ರಷ್ಟ ಅಧಿಕಾರಿಯ ಮನೆ, ಕಚೇರಿ ಸೇರಿ ಆರು ಕಡೆ ಎಸಿಬಿ ದಾಳಿ ನಡೆದಿದ್ದು ಅಪಾರ ಆಸ್ತಿ ಸಿಕ್ಕಿದೆ. ನಿಪ್ಪಾಣಿ ನಗರದಲ್ಲಿರುವ ಮನೆ, ಬೋರಗಾಂವಿಯಲ್ಲಿರುವ ಈತನಿಗೆ ಸೇರಿದ್ದೆನ್ನಲಾದ ಕಾರ್ಖಾನೆಯಲ್ಲೂ ದಾಳಿ ನಡೆದಿದೆ. ನಿಪ್ಪಾಣಿಯ ಮನೆಯ ಸ್ನಾನದ ಕೊಠಡಿಯಲ್ಲಿ ಐದು ಲಕ್ಷ ನಗದು ಸಿಕ್ಕಿದೆ. ಪವಾರ್ ಇದೇ ಜೂನ್ 30 ಕ್ಕೆ ನಿವೃತ್ತರಾಗಲಿದ್ದು ಅಷ್ಟರಲ್ಲೇ ಎಸಿಬಿ ದಾಳಿ ನಡೆಸಿ ಭ್ರಷ್ಟಾಚಾರ ಬಯಲು ಮಾಡಲಾಗಿದೆ.
ACB raid in PWDs house in Haveri, five lakhs found in bathroom, 25 acres of land records found.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm