ಬ್ರೇಕಿಂಗ್ ನ್ಯೂಸ್
24-06-22 10:38 pm Mangalore Correspondent ಕ್ರೈಂ
ಪುತ್ತೂರು, ಜೂನ್ 24 : ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ, ಕೆವೈಸಿ ಅಪ್ಡೇಟ್ ಮಾಡಬೇಕೆಂದು ಹೇಳಿ ಕರೆ ಮಾಡಿ ಹಂತ ಹಂತವಾಗಿ ಎಂಟು ಲಕ್ಷ ರೂ. ಲಪಟಾಯಿಸಿದ ಘಟನೆ ನಡೆದಿದ್ದು ಮೋಸ ಹೋದ ಶಿಕ್ಷಕಿಯೊಬ್ಬರು ಪೊಲೀಸ್ ದೂರು ನೀಡಿದ್ದಾರೆ.
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸಜಿಲಾ ಎಂಬವರು ಸರಕಾರಿ ಪ್ರೌಢಶಾಲೆ ಶಿಕ್ಷಕಿಯಾಗಿದ್ದು ಅವರ ಮಗನ ಮೊಬೈಲ್ ಸಂಖ್ಯೆಗೆ ಎಸ್ ಬಿಐ ಖಾತೆಯ ಎಟಿಎಂ ಬ್ಲಾಕ್ ಆಗಿರುವ ಬಗ್ಗೆ ಜೂನ್ 11 ರಂದು ಮೆಸೇಜ್ ಬಂದಿತ್ತು. ಆನಂತರ ಜೂನ್ 23 ರಂದು ಕೆವೈಸಿ ಅಪ್ಡೇಟ್ ಮಾಡಲು ಕಸ್ಟಮರ್ ಕೇರ್ ನಂಬರ್ ಎಂದು 8240871104 ಗೆ ಕರೆ ಮಾಡಲು ಮೆಸೇಜ್ ಬಂದಿತ್ತು. ಅದರಂತೆ ಮಗ ಪ್ರಣವ್ ಆ ಸಂಖ್ಯೆಗೆ ಕರೆ ಮಾಡಿದ್ದು ಆ ಕಡೆಯಿಂದ ನಿಮ್ಮ ಖಾತೆಯ ಪಿನ್ ಜನರೇಟ್ ಮಾಡಲು ಎಸ್ ಬಿಐ ಖಾತೆಯುಳ್ಳ ಮನೆಯ ಇತರ ಸದಸ್ಯರ ಮಾಹಿತಿ ಕೇಳಿದ್ದಾರೆ.
ಆನಂತರ ತಾಯಿಯ ಎಸ್ ಬಿಐ ಖಾತೆಯ ವಿವರ ನೀಡಿದ್ದಾನೆ. ಬಳಿಕ ಅದೇ ಅಪರಿಚಿತ ವ್ಯಕ್ತಿ ಶಿಕ್ಷಕಿಯ ಮೊಬೈಲ್ ಸಂಖ್ಯೆಗೆ ಬಂದಿರುವ, ಓಟಿಪಿ ಸಂಖ್ಯೆ ಹೇಳುವಂತೆ ತಿಳಿಸಿದ್ದಾನೆ. ಕೊನೆಗೆ, ನೀವು ಹತ್ತಿರದ ಎಟಿಎಂ ಕೇಂದ್ರಕ್ಕೆ ಹೋಗಿ ಇಂಟರ್ನೆಟ್ ಬ್ಯಾಂಕಿಂಗ್ ಜನರೇಟ್ ಮಾಡುವಂತೆ ಸೂಚಿಸಿದ್ದ. ಆದರೆ ಅದೇ ದಿನ ಸಂಜೆ ಬ್ಯಾಂಕಿನಿಂದ ಕರೆ ಮಾಡಿ, ನೀವು ಬ್ಯಾಂಕ್ ಖಾತೆಯ ಮೊಬೈಲ್ ಸಂಖ್ಯೆ ಬದಲಿಸಿದ್ದೀರಾ ಎಂದು ಕೇಳಿದಾಗ ತಾಯಿ, ಮಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಖಾತೆಯಲ್ಲಿದ್ದ ಎಂಟು ಲಕ್ಷ ರೂ.ವನ್ನು ಹಂತ ಹಂತವಾಗಿ ಖಾಲಿ ಮಾಡಲಾಗಿತ್ತು. 25 ಸಾವಿರ, 30 ಸಾವಿರ, 50 ಸಾವಿರದಂತೆ ಮೂರು ಬಾರಿ, ಆನಂತರ ತಲಾ ಎರಡು ಲಕ್ಷದಂತೆ ಮೂರು ಬಾರಿ ಒಟ್ಟು 7,47,080 ರೂ. ಹಣವನ್ನು ಲಪಟಾಯಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದಾಗ, ನಿಮ್ಮ ಖಾತೆಯಿಂದ ಎಂಟು ಲಕ್ಷ ರೂ. ಯಾರೋ ಲೋನ್ ಪಡೆದಿದ್ದಾಗಿ ತಿಳಿಸಿದ್ದಾರೆ. ಮೋಸದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರ್ ವಂಚಕರು ಎಟಿಎಂ ಬ್ಲಾಕ್ ಎಂದು ಹೇಳಿ ಯಾಮಾರಿಸಿ ಹಣ ಲಪಟಾಯಿಸಿದ್ದಾಗಿ ಪೊಲೀಸರು ಶಂಕಿಸಿದ್ದಾರೆ.
Mangalore Cyber crime, frauds loot 8 lakhs from teachers account in Puttur.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm