ಬ್ರೇಕಿಂಗ್ ನ್ಯೂಸ್
24-06-22 10:38 pm Mangalore Correspondent ಕ್ರೈಂ
ಪುತ್ತೂರು, ಜೂನ್ 24 : ಎಟಿಎಂ ಕಾರ್ಡ್ ಬ್ಲಾಕ್ ಆಗಿದೆ, ಕೆವೈಸಿ ಅಪ್ಡೇಟ್ ಮಾಡಬೇಕೆಂದು ಹೇಳಿ ಕರೆ ಮಾಡಿ ಹಂತ ಹಂತವಾಗಿ ಎಂಟು ಲಕ್ಷ ರೂ. ಲಪಟಾಯಿಸಿದ ಘಟನೆ ನಡೆದಿದ್ದು ಮೋಸ ಹೋದ ಶಿಕ್ಷಕಿಯೊಬ್ಬರು ಪೊಲೀಸ್ ದೂರು ನೀಡಿದ್ದಾರೆ.
ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ ಸಜಿಲಾ ಎಂಬವರು ಸರಕಾರಿ ಪ್ರೌಢಶಾಲೆ ಶಿಕ್ಷಕಿಯಾಗಿದ್ದು ಅವರ ಮಗನ ಮೊಬೈಲ್ ಸಂಖ್ಯೆಗೆ ಎಸ್ ಬಿಐ ಖಾತೆಯ ಎಟಿಎಂ ಬ್ಲಾಕ್ ಆಗಿರುವ ಬಗ್ಗೆ ಜೂನ್ 11 ರಂದು ಮೆಸೇಜ್ ಬಂದಿತ್ತು. ಆನಂತರ ಜೂನ್ 23 ರಂದು ಕೆವೈಸಿ ಅಪ್ಡೇಟ್ ಮಾಡಲು ಕಸ್ಟಮರ್ ಕೇರ್ ನಂಬರ್ ಎಂದು 8240871104 ಗೆ ಕರೆ ಮಾಡಲು ಮೆಸೇಜ್ ಬಂದಿತ್ತು. ಅದರಂತೆ ಮಗ ಪ್ರಣವ್ ಆ ಸಂಖ್ಯೆಗೆ ಕರೆ ಮಾಡಿದ್ದು ಆ ಕಡೆಯಿಂದ ನಿಮ್ಮ ಖಾತೆಯ ಪಿನ್ ಜನರೇಟ್ ಮಾಡಲು ಎಸ್ ಬಿಐ ಖಾತೆಯುಳ್ಳ ಮನೆಯ ಇತರ ಸದಸ್ಯರ ಮಾಹಿತಿ ಕೇಳಿದ್ದಾರೆ.
ಆನಂತರ ತಾಯಿಯ ಎಸ್ ಬಿಐ ಖಾತೆಯ ವಿವರ ನೀಡಿದ್ದಾನೆ. ಬಳಿಕ ಅದೇ ಅಪರಿಚಿತ ವ್ಯಕ್ತಿ ಶಿಕ್ಷಕಿಯ ಮೊಬೈಲ್ ಸಂಖ್ಯೆಗೆ ಬಂದಿರುವ, ಓಟಿಪಿ ಸಂಖ್ಯೆ ಹೇಳುವಂತೆ ತಿಳಿಸಿದ್ದಾನೆ. ಕೊನೆಗೆ, ನೀವು ಹತ್ತಿರದ ಎಟಿಎಂ ಕೇಂದ್ರಕ್ಕೆ ಹೋಗಿ ಇಂಟರ್ನೆಟ್ ಬ್ಯಾಂಕಿಂಗ್ ಜನರೇಟ್ ಮಾಡುವಂತೆ ಸೂಚಿಸಿದ್ದ. ಆದರೆ ಅದೇ ದಿನ ಸಂಜೆ ಬ್ಯಾಂಕಿನಿಂದ ಕರೆ ಮಾಡಿ, ನೀವು ಬ್ಯಾಂಕ್ ಖಾತೆಯ ಮೊಬೈಲ್ ಸಂಖ್ಯೆ ಬದಲಿಸಿದ್ದೀರಾ ಎಂದು ಕೇಳಿದಾಗ ತಾಯಿ, ಮಗ ಮೋಸ ಹೋಗಿರುವುದು ಅರಿವಿಗೆ ಬಂದಿದೆ.
ಬ್ಯಾಂಕ್ ಖಾತೆಯನ್ನು ಪರಿಶೀಲಿಸಿದಾಗ, ಖಾತೆಯಲ್ಲಿದ್ದ ಎಂಟು ಲಕ್ಷ ರೂ.ವನ್ನು ಹಂತ ಹಂತವಾಗಿ ಖಾಲಿ ಮಾಡಲಾಗಿತ್ತು. 25 ಸಾವಿರ, 30 ಸಾವಿರ, 50 ಸಾವಿರದಂತೆ ಮೂರು ಬಾರಿ, ಆನಂತರ ತಲಾ ಎರಡು ಲಕ್ಷದಂತೆ ಮೂರು ಬಾರಿ ಒಟ್ಟು 7,47,080 ರೂ. ಹಣವನ್ನು ಲಪಟಾಯಿಸಿರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದಾಗ, ನಿಮ್ಮ ಖಾತೆಯಿಂದ ಎಂಟು ಲಕ್ಷ ರೂ. ಯಾರೋ ಲೋನ್ ಪಡೆದಿದ್ದಾಗಿ ತಿಳಿಸಿದ್ದಾರೆ. ಮೋಸದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೈಬರ್ ವಂಚಕರು ಎಟಿಎಂ ಬ್ಲಾಕ್ ಎಂದು ಹೇಳಿ ಯಾಮಾರಿಸಿ ಹಣ ಲಪಟಾಯಿಸಿದ್ದಾಗಿ ಪೊಲೀಸರು ಶಂಕಿಸಿದ್ದಾರೆ.
Mangalore Cyber crime, frauds loot 8 lakhs from teachers account in Puttur.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm