ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm