ಬ್ರೇಕಿಂಗ್ ನ್ಯೂಸ್
28-06-22 01:05 pm HK News Desk ಕ್ರೈಂ
ಮೈಸೂರು, ಜೂನ್ 28 : ಪತ್ನಿಯ ಬಗ್ಗೆ ಅನೈತಿಕ ಸಂಬಂಧ ಶಂಕೆಯಿಂದ ಆಕೆಯ ರುಂಡವನ್ನೇ ಕತ್ತರಿಸಿ ಭೀಕರವಾಗಿ ಕೊಲೆಗೈದ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪುಟ್ಟಮ್ಮ(40) ಎಂಬ ಮಹಿಳೆ ಮೃತ ದುರ್ದೈವಿ. ಕೊಲೆಯ ಬಳಿಕ ಪತಿ ದೇವರಾಜ್ ತಪ್ಪಿಸಿಕೊಂಡಿದ್ದು ಬಂಧನಕ್ಕಾಗಿ ವರುಣಾ ಪೊಲೀಸರು ಬಲೆ ಬೀಸಿದ್ದಾರೆ.
ಈ ಹಿಂದೆ ಮೊದಲ ಹೆಂಡತಿಯನ್ನೂ ಶೀಲ ಶಂಕಿಸಿ ಕೊಲೆಗೆ ಯತ್ನಿಸಿದ್ದ ದೇವರಾಜ್, ಜೈಲು ವಾಸವನ್ನೂ ಅನುಭವಿಸಿದ್ದ. ಬಳಿಕ ಮೊದಲ ಹೆಂಡತಿಯಿಂದ ದೂರವಾಗಿ 21 ವರ್ಷಗಳ ಹಿಂದೆ ಪುಟ್ಟಮ್ಮಳನ್ನ ಎರಡನೇ ವಿವಾಹವಾಗಿದ್ದ. ಎರಡನೇ ಮದುವೆ ಆದರೂ ಆಕೆಯ ಬಗ್ಗೆಯೂ ಶೀಲ ಶಂಕಿಸಿ ಆಗಾಗ ಜಗಳ ಮಾಡುತ್ತಿದ್ದ.
ಇವರಿಗೆ 20 ವರ್ಷದ ಮಗಳಿದ್ದರೂ ಪತ್ನಿಯ ಮೇಲೆ ಶಂಕೆ ವ್ಯಕ್ತಪಡಿಸುತ್ತಿದ್ದ. ಇದೇ ಶಂಕೆಯಲ್ಲಿ ಕಳೆದ ಒಂದು ತಿಂಗಳಿಂದ ಪುಟ್ಟಮ್ಮಳಿಗೆ ಕಿರುಕುಳವನ್ನೂ ನೀಡುತ್ತಿದ್ದ. ಮಗಳು ಪವಿತ್ರ ಕಾಲೇಜಿಗೆ ಹೋಗುತ್ತಿದ್ದ ವೇಳೆ ಇದೇ ವಿಚಾರಕ್ಕೆ ಮನೆಯಲ್ಲಿ ಕ್ಯಾತೆ ತೆಗೆದು ಜಗಳ ಮಾಡುತ್ತಿದ್ದ ಎನ್ನಲಾಗಿದೆ.
ಇದೀಗ ಮಗಳು ಮನೆಯಲ್ಲಿ ಇಲ್ಲದೇ ಇದ್ದಾಗ ಪತ್ನಿಯನ್ನ ಭೀಕರವಾಗಿ ಕೊಂದಿದ್ದಾನೆ. ರುಂಡ ಮುಂಡವನ್ನ ಬೇರೆ ಆಗುವಂತೆ ಭೀಕರವಾಗಿ ಕೊಲೆ ಮಾಡಿದ್ದು ಈ ಬಗ್ಗೆ ತಂದೆ ದೇವರಾಜ್ ವಿರುದ್ದ ಮಗಳು ಪವಿತ್ರ ದೂರು ನೀಡಿದ್ದಾಳೆ. ವರುಣಾ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ದೇವರಾಜ್ ಬಂಧನಕ್ಕೆ ಮುಂದಾಗಿದ್ದಾರೆ.
Mysuru husband suspects of extra martial affair beheads wife. The deceased has been identified as Puttamma (40).
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm