ಬ್ರೇಕಿಂಗ್ ನ್ಯೂಸ್
02-07-22 05:02 pm HK News Desk ಕ್ರೈಂ
ನವದೆಹಲಿ, ಜುಲೈ 2: ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಉದಯಪುರದ ಕನ್ನಯ್ಯಲಾಲ್ ಕೊಲೆ ದೇಶದಲ್ಲಿ ಸದ್ದು ಮಾಡಿರುವ ಬೆನ್ನಲ್ಲೇ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲೂ ಇದೇ ರೀತಿಯ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ.
ಅಮರಾವತಿ ನಗರದಲ್ಲಿ ಪಶು ಚಿಕಿತ್ಸಾಲಯದ ಮೆಡಿಕಲ್ ಶಾಪ್ ಹೊಂದಿದ್ದ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ (54) ಎಂಬವರನ್ನು ಜೂನ್ 21 ರಂದು ರಾತ್ರಿ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ. ಉಮೇಶ್ ಕೊಲ್ಹೆ ಅವರು ಕೂಡ ಕೊಲೆಯಾಗುವುದಕ್ಕೂ ಮುನ್ನ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದರು. ಆದರೆ ಆಗ ಯಾವ ಕಾರಣಕ್ಕೆ ಕೊಲೆ ಮಾಡಿದ್ದರು ಎನ್ನೋದು ತಿಳಿದುಬಂದಿರಲಿಲ್ಲ. ರಾತ್ರಿ ವೇಳೆ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಆಗಂತುಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಂದಿದ್ದಾರೆ. ಈ ವೇಳೆ, ಉಮೇಶ್ ಅವರ ಮಗ, ಪತ್ನಿಯೂ ಇದ್ದುದರಿಂದ ರಸ್ತೆಗೆ ಬಂದು ಬೊಬ್ಬೆ ಹಾಕಿದ್ದರು. ಬಳಿಕ ಹಂತಕರು ಪರಾರಿಯಾಗಿದ್ದರೆ, ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಉಮೇಶ್ ಸಾವು ಕಂಡಿದ್ದರು.
ಮಗ ನೀಡಿದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ತೌಫೀಕ್ ತಸ್ಲಿಮ್ (22), ಶಾರುಖ್ ಪಠಾಣ್ (25), ಅಬ್ದುಲ್ ತೌಫಿಕ್ (24), ಶೋಯೆಬ್ ಖಾನ್ (22), ಅತಿಬ್ ರಶೀದ್ (22), ಮುದಾಸಿರ್ ಇಬ್ರಾಹಿಂ(23) ಬಂಧಿತರು.
ಇದೀಗ ಕನ್ನಯ್ಯ ಲಾಲ್ ಕೊಲೆಯ ವಿಚಾರ ಸಾಕಷ್ಟು ಸದ್ದು ಮಾಡಿರುವುದರಿಂದ ಉಮೇಶ್ ಅವರನ್ನೂ ಇದೇ ಕಾರಣಕ್ಕಾಗಿ ಕೊಲೆ ಮಾಡಲಾಗಿತ್ತು ಎಂದು ಅಮರಾವತಿ ಬಿಜೆಪಿ ಘಟಕದ ನಾಯಕರು ಆರೋಪಿಸಿದ್ದಾರೆ. ಅಲ್ಲದೆ, ಪೊಲೀಸರು ಕೊಲೆಯ ಹಿಂದಿನ ಕಾರಣ ಪತ್ತೆ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.
ಆರೋಪ ಕೇಳಿಬಂದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಉಮೇಶ್ ಕೊಲ್ಹೆ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದ್ದಾರೆ.
A 54-year-old chemist was hacked to death in Maharashtra’s Amravati for allegedly making a social media post in support of suspended BJP leader Nupur Sharma.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm