ಬ್ರೇಕಿಂಗ್ ನ್ಯೂಸ್
02-07-22 05:02 pm HK News Desk ಕ್ರೈಂ
ನವದೆಹಲಿ, ಜುಲೈ 2: ಬಿಜೆಪಿ ನಾಯಕಿ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದ ಉದಯಪುರದ ಕನ್ನಯ್ಯಲಾಲ್ ಕೊಲೆ ದೇಶದಲ್ಲಿ ಸದ್ದು ಮಾಡಿರುವ ಬೆನ್ನಲ್ಲೇ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲೂ ಇದೇ ರೀತಿಯ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ.
ಅಮರಾವತಿ ನಗರದಲ್ಲಿ ಪಶು ಚಿಕಿತ್ಸಾಲಯದ ಮೆಡಿಕಲ್ ಶಾಪ್ ಹೊಂದಿದ್ದ ಉಮೇಶ್ ಪ್ರಹ್ಲಾದರಾವ್ ಕೊಲ್ಹೆ (54) ಎಂಬವರನ್ನು ಜೂನ್ 21 ರಂದು ರಾತ್ರಿ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ. ಉಮೇಶ್ ಕೊಲ್ಹೆ ಅವರು ಕೂಡ ಕೊಲೆಯಾಗುವುದಕ್ಕೂ ಮುನ್ನ ನೂಪುರ್ ಶರ್ಮಾ ಪರ ಪೋಸ್ಟ್ ಹಾಕಿದ್ದರು. ಆದರೆ ಆಗ ಯಾವ ಕಾರಣಕ್ಕೆ ಕೊಲೆ ಮಾಡಿದ್ದರು ಎನ್ನೋದು ತಿಳಿದುಬಂದಿರಲಿಲ್ಲ. ರಾತ್ರಿ ವೇಳೆ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕಿನಲ್ಲಿ ಬಂದಿದ್ದ ಆಗಂತುಕರು ಚಾಕುವಿನಿಂದ ಕುತ್ತಿಗೆ ಕೊಯ್ದು ಕೊಂದಿದ್ದಾರೆ. ಈ ವೇಳೆ, ಉಮೇಶ್ ಅವರ ಮಗ, ಪತ್ನಿಯೂ ಇದ್ದುದರಿಂದ ರಸ್ತೆಗೆ ಬಂದು ಬೊಬ್ಬೆ ಹಾಕಿದ್ದರು. ಬಳಿಕ ಹಂತಕರು ಪರಾರಿಯಾಗಿದ್ದರೆ, ಉಮೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಉಮೇಶ್ ಸಾವು ಕಂಡಿದ್ದರು.
ಮಗ ನೀಡಿದ ದೂರಿನಂತೆ ತನಿಖೆ ನಡೆಸಿದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ತೌಫೀಕ್ ತಸ್ಲಿಮ್ (22), ಶಾರುಖ್ ಪಠಾಣ್ (25), ಅಬ್ದುಲ್ ತೌಫಿಕ್ (24), ಶೋಯೆಬ್ ಖಾನ್ (22), ಅತಿಬ್ ರಶೀದ್ (22), ಮುದಾಸಿರ್ ಇಬ್ರಾಹಿಂ(23) ಬಂಧಿತರು.
ಇದೀಗ ಕನ್ನಯ್ಯ ಲಾಲ್ ಕೊಲೆಯ ವಿಚಾರ ಸಾಕಷ್ಟು ಸದ್ದು ಮಾಡಿರುವುದರಿಂದ ಉಮೇಶ್ ಅವರನ್ನೂ ಇದೇ ಕಾರಣಕ್ಕಾಗಿ ಕೊಲೆ ಮಾಡಲಾಗಿತ್ತು ಎಂದು ಅಮರಾವತಿ ಬಿಜೆಪಿ ಘಟಕದ ನಾಯಕರು ಆರೋಪಿಸಿದ್ದಾರೆ. ಅಲ್ಲದೆ, ಪೊಲೀಸರು ಕೊಲೆಯ ಹಿಂದಿನ ಕಾರಣ ಪತ್ತೆ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.
ಆರೋಪ ಕೇಳಿಬಂದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಉಮೇಶ್ ಕೊಲ್ಹೆ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸಿದ್ದಾರೆ.
A 54-year-old chemist was hacked to death in Maharashtra’s Amravati for allegedly making a social media post in support of suspended BJP leader Nupur Sharma.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm