ಬ್ರೇಕಿಂಗ್ ನ್ಯೂಸ್
01-10-20 12:54 pm Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 1: ಮುಡಿಪು ಮತ್ತು ಬಾಳೆಪುಣಿಯಲ್ಲಿ ಅಕ್ರಮ ಮಣ್ಣು ಸಾಗಾಟ ದಂಧೆ ನಡೆಯುತ್ತಿರುವ ಬಗ್ಗೆ ನಿರಂತರ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ 28 ಬೃಹತ್ ಲಾರಿ ಹಾಗೂ ಐದು ಜೆಸಿಬಿ ಯಂತ್ರಗಳನ್ನು ವಶಕ್ಕೆ ಪಡೆದಿದೆ.
ಲಾಕ್ಡೌನ್ ಸಂದರ್ಭ ಮಾತ್ರವಲ್ಲದೆ ಅದರ ನಂತರವೂ ಮುಡಿಪು ಇನ್ಫೋಸಿಸ್ ಬಳಿಯಿಂದ ಹೊರರಾಜ್ಯಗಳಿಗೆ ಅಕ್ರಮ ಮಣ್ಣು ಸಾಗಾಟ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ನಿರಂತರ ದೂರುಗಳು ಬಂದಿದ್ದವು. ಕರೊನಾ ಸೋಂಕು ತಡೆಗೆ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಜನರ ಪ್ರವೇಶಕ್ಕೆ ತಡೆ ಹಾಗೂ ಕರ್ನಾಟಕದಿಂದ ಹೊರರಾಜ್ಯಗಳಿಗೆ ಹೋಗುವುದಕ್ಕೆ ನಿಷೇಧವಿದ್ದಾಗಲೂ ಮುಡಿಪುವಿನಿಂದ ಮಣ್ಣು ಸಾಗಾಟ ಅಡೆತಡೆಯಿಲ್ಲದೆ ನಡೆದಿತ್ತು. ಜೆಸಿಬಿ ಯಂತ್ರಗಳನ್ನು ಬಳಸಿ ಬೃಹತ್ ಲಾರಿಗಳಲ್ಲಿ ಮಣ್ಣು ಸಾಗಾಟ ಮಾಡಲಾಗುತ್ತಿದ್ದು, ಈ ಮಣ್ಣು ಸಿಮೆಂಟ್ಗೆ ಮಿಶ್ರಣ ಮಾಡಲು ಬಳಕೆಯಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಬಾಳೆಪುಣಿಯಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಕಪ್ಪು ಕಲ್ಲಿನ ಕ್ವಾರಿಗೂ ಅಧಿಕಾರಿಗಳು ದಾಳಿ ನಡೆಸಿ, ವಶಕ್ಕೆ ಪಡೆದ ಲಾರಿ ಮತ್ತು ಜೆಸಿಬಿ ಯಂತ್ರಗಳನ್ನು ಕೊಣಾಜೆ ಠಾಣೆಗೆ ಹಸ್ತಾಂತರಿಸಿದ್ದಾರೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
16-03-26 12:38 pm
HK News Staffer
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am