ಬ್ರೇಕಿಂಗ್ ನ್ಯೂಸ್
05-07-22 10:32 am Mangalore Correspondent ಕ್ರೈಂ
ಬಂಟ್ವಾಳ, ಜುಲೈ 5: ಕ್ಷುಲ್ಲಕ ಕಾರಣಕ್ಕೆ ದ್ವೇಷ ಕಟ್ಟಿಕೊಂಡು ಜಗಳವಾಡಿ ಯುವಕನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ಬಿ.ಸಿ. ರೋಡ್ ಬಳಿಯ ಶಾಂತಿಯಂಗಡಿ ಬಳಿ ನಡೆದಿದೆ.
ಶಾಂತಿಯಂಗಡಿ ಬಿ ಮೂಡ ಗ್ರಾಮದ ನಿವಾಸಿ ಆಸಿಫ್ (27) ಮೃತ ಯುವಕ. ಸೋಮವಾರ ರಾತ್ರಿ 10.30ರ ಸುಮಾರಿಗೆ ಆಸಿಫ್, ಶಾಂತಿಯಂಗಡಿ ಸ್ಟೋರ್ ಬಳಿ ಇದ್ದೇನೆ. ಕೂಡಲೇ ಬನ್ನಿ. ಇಲ್ಲಿ ಮಾರಿಪಳ್ಳ ಮಹಮ್ಮದ್ ನೌಫಾಲ್ ಮತ್ತು ಮಹಮ್ಮದ್ ನೌಸೀರ್ ಸ್ಕೂಟರ್ ತಡೆದು ಧಮ್ಕಿ ಹಾಕುತ್ತಿದ್ದಾರೆಂದು ಹೇಳಿ, ಕೂಡಲೇ ಬರುವಂತೆ ತನ್ನ ಗೆಳೆಯರಿಗೆ ಫೋನಾಯಿಸಿದ್ದ. ಗೆಳೆಯರಾದ ಮಹಮ್ಮದ್, ಅನ್ಸಾರ್, ಕೌಶಿಕ್, ನಿಜಾಮುದ್ದೀನ್ ಸೇರಿಕೊಂಡು ಸ್ಥಳಕ್ಕೆ ತೆರಳಿದ್ದರು.
ಈ ವೇಳೆ, ಪೊನ್ನೋಡಿಯ ಲಗೂನ್ ಕೊಕೊನಟ್ ಹೊಟೇಲ್ ಬಳಿಗೆ ತೆರಳಿದ್ದು ಅಲ್ಲಿ ಮಾತಿಗೆ ಮಾತು ಬೆಳೆದು ಘರ್ಷಣೆ ಆಗಿದೆ. ಆಸಿಫ್ ಜೊತೆಗೆ ಬಂದಿದ್ದ ಮಹಮ್ಮದ್ ನೌಫಾಲ್ ಮೇಲೆ ಆರೋಪಿಗಳು ಮರದ ಸೋಂಟೆಯಲ್ಲಿ ಹಲ್ಲೆ ನಡೆಸಿದ್ದಾರೆ. ಎರಡೂ ತಂಡಗಳ ಮಧ್ಯೆ ಹೊಡೆದಾಟ ನಡೆದಿದ್ದು ಈ ವೇಳೆ ಅರೋಪಿ ನೌಫಾಲ್ ತನ್ನ ಕೈಲಿದ್ದ ಚೂರಿಯನ್ನು ತೆಗೆದು ಆಸಿಫ್ ಹೊಟ್ಟೆಯ ಬಲಬದಿಗೆ ತಿವಿದಿದ್ದಾನೆ. ಆಸಿಫ್ ಬೊಬ್ಬೆ ಹೊಡೆದು ನೆಲಕ್ಕೆ ಬಿದ್ದಿದ್ದು ಕೂಡಲೇ ಇತರ ಗೆಳೆಯರು ಸೇರಿ ಆತನನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಒಯ್ದಿದ್ದಾರೆ. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಒಯ್ದಾಗ ಆಸಿಫ್ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ.
ಈ ಬಗ್ಗೆ ಆಸಿಫ್ ಸ್ನೇಹಿತ ಮಹಮ್ಮದ್ ನೌಫಾಲ್ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದು ಪ್ರತಿ ದಿನ ಆಸಿಫ್ ಲಗೂನ್ ಹೊಟೇಲ್ ಬಳಿಯಿಂದ ತೆರಳುವಾಗ ಆರೋಪಿತ ಮಾರಿಪಳ್ಳದ ಮಹಮ್ಮದ್ ನೌಫಾಲ್, ನೌಸೀರ್ ಅವರನ್ನು ನೋಡಿ ಸುಖಾಸುಮ್ಮನೆ ಹಾರ್ನ್ ಮಾಡುತ್ತಾನೆಂದು ದ್ವೇಷ ಕಟ್ಟಿಕೊಂಡು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಲ್ಲದೆ, ವಿಚಾರಿಸಲು ಹೋದಾಗ ಚೂರಿಯಿಂದ ತಿವಿದು ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A youth was murdered by two others over the issue of honking and staring while passing by. A complaint in this regard is filed in city police station by friend of the deceased Mohammed Naufal (28), a resident of Shantiangadi. The victim of stabbing incident is Mohammed Asif, a resident of Shantiangadi of B Mooda village. The accused are Mohammed Naufal and Mohammed Nasir, residents of Maripalla.
11-06-26 08:31 pm
HK News Staffer
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 08:44 pm
HK News Staffer
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm