ಬ್ರೇಕಿಂಗ್ ನ್ಯೂಸ್
01-10-20 02:30 pm Headline Karnataka News Network ಕ್ರೈಂ
ಬಲರಾಂಪುರ, ಅಕ್ಟೋಬರ್ 1: ಹತ್ರಾಸ್ ಅತ್ಯಾಚಾರ ಪ್ರಕರಣ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿರುವ ನಡುವೆಯೇ ಈ ಘಟನೆ ನಡೆದಿದೆ. ಕಾಲೇಜಿನ ಅಡ್ಮೀಷನ್ಗೆ ಹೋದ ಯುವತಿ ಹಿಂತಿರುಗುವ ವೇಳೆ ಇಬ್ಬರು ಪುರುಷರು ದಲಿತ ಜನಾಂಗಕ್ಕೆ ಸೇರಿದ ಯುವತಿಯ ಮೇಲೆ ಎರಗಿದ್ದು ಗಂಭೀರ ಸ್ಥಿತಿಯಲ್ಲಿ ಈಕೆ ಮನೆ ಸೇರಿದ್ದಳು ಎಂದು ಕುಟುಂಬದವರು ತಿಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ದೇವ್ ರಂಜನ್ ವರ್ಮ ಹೇಳಿದ್ದಾರೆ.
ಸಮೀಪದ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಳು ಎಂದು ಅವರು ತಿಳಿಸಿದ್ದಾರೆ. ಆಸ್ಪತ್ರೆಯವರು ಪೊಲೀಸರಿಗೆ ವಿಷಯ ವರದಿ ಮಾಡಿದಾಗ ಯುವತಿಯ ಕುಟುಂಬದವರು ಆಕೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಳು ಎಂದು ತಿಳಿಸಿದರು. ಆರೋಪಿಗಳಾದ ಶಾಹಿದ್ ಮತ್ತು ಸಾಹಿಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ವರ್ಮ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಹತ್ರಾಸ್ ಘಟನೆ ಬಳಿಕ ಮತ್ತೊಬ್ಬ ಮಗಳು ಬಲರಾಂಪುರದಲ್ಲಿ ಸಾಮೂಹಿಕ ಅತ್ಯಾಚಾರದಿಂದ ಸಾವಿಗೀಡಾಗಿದ್ದಾಳೆ. ಶ್ರದ್ಧಾಂಜಲಿ! ಎಂದು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.
ಇಂಜೆಕ್ಷನ್ ನೀಡಿ ಅತ್ಯಾಚಾರ:
ಬುಧವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಸಂತ್ರಸ್ತೆ ತಾಯಿ, ‘ಅತ್ಯಾಚಾರಿಗಳು ಮಗಳ ಕಾಲು ಮತ್ತು ಬೆನ್ನನ್ನು ಮುರಿದಿದ್ದಾರೆ’ ಎಂದು ಆರೋಪಿಸಿದ್ದಾರೆ. ಆದರೆ ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ. ಶವ ಪರೀಕ್ಷೆಯಲ್ಲಿ ಇದು ದೃಢಪಟ್ಟಿಲ್ಲ ಎಂದಿದ್ದಾರೆ.
ಕಾಲೇಜಿಗೆ ಸೇರಲು ನನ್ನ ಮಗಳು ಹೋಗಿದ್ದಳು. ಬರುವಾಗ ಮೂವರು ಅವಳನ್ನು ಅಪಹರಿಸಿ ತಮ್ಮ ಕೊಠಡಿಗೆ ಒಯ್ದಿದ್ದಾರೆ. ಅಲ್ಲಿ ಅವಳಿಗೆ ಇಂಜೆಕ್ಷನ್ ನೀಡಿ ಅತ್ಯಾಚಾರ ಮಾಡಿದ್ದಾರೆ. ನಂತರ ಅವಳನ್ನು ಇ– ರಿಕ್ಷಾದಲ್ಲಿ ಮನೆಗೆ ಕಳುಹಿಸಿದ್ದಾರೆ. ಅವಳನ್ನು ಮನೆಯ ಹತ್ತಿರ ಬಿಟ್ಟು ರಿಕ್ಷಾ ತೆರಳಿದೆ. ನನ್ನ ಮಗಳು ನಿಂತುಕೊಳ್ಳುವ ಮತ್ತು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ‘ ಎಂದು ತಾಯಿ ವಿವರಿಸಿದ್ದಾರೆ.
ಶವಪರೀಕ್ಷೆ ಬಳಿಕ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಸ್ಥಳೀಯ ಮುಖಂಡರು ಸಂತ್ರಸ್ತೆ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ರೂ. 6 ಲಕ್ಷ ಆರ್ಥಿಕ ನೆರವು ಒದಗಿಸುವ ಪತ್ರವನ್ನು ನೀಡಿ, ತಾಯಿಯ ಹೆಸರಿಗೆ ಹಣವನ್ನು ಮಧ್ಯಾಹ್ನದ ವೇಳೆಗೆ ವರ್ಗಾಯಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm