ಬ್ರೇಕಿಂಗ್ ನ್ಯೂಸ್
01-10-20 02:30 pm Headline Karnataka News Network ಕ್ರೈಂ
ಬಲರಾಂಪುರ, ಅಕ್ಟೋಬರ್ 1: ಹತ್ರಾಸ್ ಅತ್ಯಾಚಾರ ಪ್ರಕರಣ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿರುವ ನಡುವೆಯೇ ಈ ಘಟನೆ ನಡೆದಿದೆ. ಕಾಲೇಜಿನ ಅಡ್ಮೀಷನ್ಗೆ ಹೋದ ಯುವತಿ ಹಿಂತಿರುಗುವ ವೇಳೆ ಇಬ್ಬರು ಪುರುಷರು ದಲಿತ ಜನಾಂಗಕ್ಕೆ ಸೇರಿದ ಯುವತಿಯ ಮೇಲೆ ಎರಗಿದ್ದು ಗಂಭೀರ ಸ್ಥಿತಿಯಲ್ಲಿ ಈಕೆ ಮನೆ ಸೇರಿದ್ದಳು ಎಂದು ಕುಟುಂಬದವರು ತಿಳಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ದೇವ್ ರಂಜನ್ ವರ್ಮ ಹೇಳಿದ್ದಾರೆ.
ಸಮೀಪದ ಆಸ್ಪತ್ರೆಗೆ ಆಕೆಯನ್ನು ಕರೆದೊಯ್ಯುವಾಗ ಮಾರ್ಗ ಮಧ್ಯೆ ಯುವತಿ ಮೃತಪಟ್ಟಳು ಎಂದು ಅವರು ತಿಳಿಸಿದ್ದಾರೆ. ಆಸ್ಪತ್ರೆಯವರು ಪೊಲೀಸರಿಗೆ ವಿಷಯ ವರದಿ ಮಾಡಿದಾಗ ಯುವತಿಯ ಕುಟುಂಬದವರು ಆಕೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದಳು ಎಂದು ತಿಳಿಸಿದರು. ಆರೋಪಿಗಳಾದ ಶಾಹಿದ್ ಮತ್ತು ಸಾಹಿಲ್ ಎಂಬುವರನ್ನು ಬಂಧಿಸಲಾಗಿದೆ ಎಂದು ವರ್ಮ ಹೇಳಿದ್ದಾರೆ. ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್, ಹತ್ರಾಸ್ ಘಟನೆ ಬಳಿಕ ಮತ್ತೊಬ್ಬ ಮಗಳು ಬಲರಾಂಪುರದಲ್ಲಿ ಸಾಮೂಹಿಕ ಅತ್ಯಾಚಾರದಿಂದ ಸಾವಿಗೀಡಾಗಿದ್ದಾಳೆ. ಶ್ರದ್ಧಾಂಜಲಿ! ಎಂದು ಟ್ವಿಟರ್ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇಂಜೆಕ್ಷನ್ ನೀಡಿ ಅತ್ಯಾಚಾರ:
ಬುಧವಾರ ರಾತ್ರಿ ಸುದ್ದಿಗಾರರ ಜತೆ ಮಾತನಾಡಿದ ಸಂತ್ರಸ್ತೆ ತಾಯಿ, ‘ಅತ್ಯಾಚಾರಿಗಳು ಮಗಳ ಕಾಲು ಮತ್ತು ಬೆನ್ನನ್ನು ಮುರಿದಿದ್ದಾರೆ’ ಎಂದು ಆರೋಪಿಸಿದ್ದಾರೆ. ಆದರೆ ಪೊಲೀಸರು ಇದನ್ನು ಅಲ್ಲಗಳೆದಿದ್ದಾರೆ. ಶವ ಪರೀಕ್ಷೆಯಲ್ಲಿ ಇದು ದೃಢಪಟ್ಟಿಲ್ಲ ಎಂದಿದ್ದಾರೆ.
ಕಾಲೇಜಿಗೆ ಸೇರಲು ನನ್ನ ಮಗಳು ಹೋಗಿದ್ದಳು. ಬರುವಾಗ ಮೂವರು ಅವಳನ್ನು ಅಪಹರಿಸಿ ತಮ್ಮ ಕೊಠಡಿಗೆ ಒಯ್ದಿದ್ದಾರೆ. ಅಲ್ಲಿ ಅವಳಿಗೆ ಇಂಜೆಕ್ಷನ್ ನೀಡಿ ಅತ್ಯಾಚಾರ ಮಾಡಿದ್ದಾರೆ. ನಂತರ ಅವಳನ್ನು ಇ– ರಿಕ್ಷಾದಲ್ಲಿ ಮನೆಗೆ ಕಳುಹಿಸಿದ್ದಾರೆ. ಅವಳನ್ನು ಮನೆಯ ಹತ್ತಿರ ಬಿಟ್ಟು ರಿಕ್ಷಾ ತೆರಳಿದೆ. ನನ್ನ ಮಗಳು ನಿಂತುಕೊಳ್ಳುವ ಮತ್ತು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ‘ ಎಂದು ತಾಯಿ ವಿವರಿಸಿದ್ದಾರೆ.
ಶವಪರೀಕ್ಷೆ ಬಳಿಕ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ, ಎಸ್ಪಿ ಹಾಗೂ ಸ್ಥಳೀಯ ಮುಖಂಡರು ಸಂತ್ರಸ್ತೆ ಮನೆಗೆ ತೆರಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೆ ರೂ. 6 ಲಕ್ಷ ಆರ್ಥಿಕ ನೆರವು ಒದಗಿಸುವ ಪತ್ರವನ್ನು ನೀಡಿ, ತಾಯಿಯ ಹೆಸರಿಗೆ ಹಣವನ್ನು ಮಧ್ಯಾಹ್ನದ ವೇಳೆಗೆ ವರ್ಗಾಯಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm