ಬ್ರೇಕಿಂಗ್ ನ್ಯೂಸ್
26-07-22 10:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 26: ನಾಲ್ಕು ದಿನಗಳ ಹಿಂದೆ ಬೆಳ್ಳಾರೆಯಲ್ಲಿ ನಡೆದಿದ್ದ ಮಸೂದ್ ಎಂಬ ಯುವಕನ ಕೊಲೆಗೆ ಪ್ರತೀಕಾರ ಎನ್ನುವಂತೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತನನ್ನು ಕಡಿದು ಹತ್ಯೆ ಮಾಡಲಾಗಿದೆ.
ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ, ಸ್ಥಳೀಯವಾಗಿ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಪ್ರವೀಣ್ ಕುಮಾರ್ ನೆಟ್ಟಾರು (31) ಎಂಬ ಯುವಕನನ್ನು ಭೀಕರವಾಗಿ ಕಡಿದು ಹತ್ಯೆ ಮಾಡಲಾಗಿದೆ. ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ತೆರಳಲು ಅನುವಾದ ಸಂದರ್ಭದಲ್ಲಿಯೇ ಬೈಕಿನಲ್ಲಿ ಬಂದಿದ್ದ ಮೂವರು ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಪ್ರವೀಣ್ ಅವರನ್ನು ಆಸ್ಪತ್ರೆಗೆ ಒಯ್ಯುವ ದಾರಿಯಲ್ಲೇ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.


ನಾಲ್ಕು ದಿನಗಳ ಹಿಂದೆ ಕಾಸರಗೋಡು ಮೂಲದ ಮಸೂದ್ ಎನ್ನುವ ಯುವಕನ ಮೇಲೆ ಎಂಟು ಜನರು ಗುಂಪು ಹಲ್ಲೆ ನಡೆಸಿತ್ತು. ತಲೆಯ ಭಾಗಕ್ಕೆ ಬಾಟಲಿಯಿಂದ ಹಲ್ಲೆ ನಡೆಸಿದ್ದರಿಂದ ಎರಡು ದಿನಗಳ ನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಮಸೂದ್ ಸಾವನ್ನಪ್ಪಿದ್ದ. ಈ ಘಟನೆ ಬಗ್ಗೆ ಮುಸ್ಲಿಂ ಸಂಘಟನೆಗಳು, ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಜಾಲತಾಣದಲ್ಲಿ ಇದಕ್ಕೆ ಪ್ರತೀಕಾರ ತೀರಿಸಿಯೇ ಸಿದ್ಧ ಎನ್ನುವ ಪೋಸ್ಟ್ ಗಳು ಹರಿದಾಡಿದ್ದವು. ಎರಡೇ ದಿನದ ಅಂತರದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕಡಿದು ಕೊಲ್ಲಲಾಗಿದೆ. ಮಸೂದ್ ನನ್ನು ಹೊಡೆದು ಹಾಕಿದ್ದ ಯುವಕರು ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನುವ ಆರೋಪವೂ ಕೇಳಿಬಂದಿತ್ತು. ಅದೇ ಘಟನೆಗೆ ಈಗ ಕಾಸರಗೋಡಿನಿಂದ ಬಂದಿದ್ದ ಯುವಕರು ಪ್ರತೀಕಾರ ತೀರಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.


ಪುತ್ತೂರಿನ ಆಸ್ಪತ್ರೆಯಲ್ಲಿ ಪ್ರವೀಣ್ ಅಸುನೀಗಿದ್ದಾರೆ. ವಿಷಯ ತಿಳಿಯುತ್ತಲೇ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಪುತ್ತೂರು ನಗರ ಮತ್ತು ಬೆಳ್ಳಾರೆ ಪೇಟೆಯಲ್ಲಿ ಪೊಲೀಸರು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ರಾತ್ರಿಯೇ ಉದ್ವಿಗ್ನ ಸ್ಥಿತಿ ನೆಲೆಸಿದೆ.
Bellare BJP leader Brutally murdered in Sullia. The deceased has been identified as Praveen. He was a BJP Yuva Morcha District Secretary. Revenge murder suspected. Recently a gang attacked a Mulsim youth brutally over a trivial reason in Kalenja of Bellare.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm