ಬ್ರೇಕಿಂಗ್ ನ್ಯೂಸ್
26-07-22 10:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 26: ನಾಲ್ಕು ದಿನಗಳ ಹಿಂದೆ ಬೆಳ್ಳಾರೆಯಲ್ಲಿ ನಡೆದಿದ್ದ ಮಸೂದ್ ಎಂಬ ಯುವಕನ ಕೊಲೆಗೆ ಪ್ರತೀಕಾರ ಎನ್ನುವಂತೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತನನ್ನು ಕಡಿದು ಹತ್ಯೆ ಮಾಡಲಾಗಿದೆ.
ದ.ಕ. ಜಿಲ್ಲಾ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ, ಸ್ಥಳೀಯವಾಗಿ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದ ಪ್ರವೀಣ್ ಕುಮಾರ್ ನೆಟ್ಟಾರು (31) ಎಂಬ ಯುವಕನನ್ನು ಭೀಕರವಾಗಿ ಕಡಿದು ಹತ್ಯೆ ಮಾಡಲಾಗಿದೆ. ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಪ್ರವೀಣ್, ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ತೆರಳಲು ಅನುವಾದ ಸಂದರ್ಭದಲ್ಲಿಯೇ ಬೈಕಿನಲ್ಲಿ ಬಂದಿದ್ದ ಮೂವರು ತಲವಾರಿನಿಂದ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಪ್ರವೀಣ್ ಅವರನ್ನು ಆಸ್ಪತ್ರೆಗೆ ಒಯ್ಯುವ ದಾರಿಯಲ್ಲೇ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.


ನಾಲ್ಕು ದಿನಗಳ ಹಿಂದೆ ಕಾಸರಗೋಡು ಮೂಲದ ಮಸೂದ್ ಎನ್ನುವ ಯುವಕನ ಮೇಲೆ ಎಂಟು ಜನರು ಗುಂಪು ಹಲ್ಲೆ ನಡೆಸಿತ್ತು. ತಲೆಯ ಭಾಗಕ್ಕೆ ಬಾಟಲಿಯಿಂದ ಹಲ್ಲೆ ನಡೆಸಿದ್ದರಿಂದ ಎರಡು ದಿನಗಳ ನಂತರ ಮಂಗಳೂರಿನ ಆಸ್ಪತ್ರೆಯಲ್ಲಿ ಮಸೂದ್ ಸಾವನ್ನಪ್ಪಿದ್ದ. ಈ ಘಟನೆ ಬಗ್ಗೆ ಮುಸ್ಲಿಂ ಸಂಘಟನೆಗಳು, ನಾಯಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಜಾಲತಾಣದಲ್ಲಿ ಇದಕ್ಕೆ ಪ್ರತೀಕಾರ ತೀರಿಸಿಯೇ ಸಿದ್ಧ ಎನ್ನುವ ಪೋಸ್ಟ್ ಗಳು ಹರಿದಾಡಿದ್ದವು. ಎರಡೇ ದಿನದ ಅಂತರದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕಡಿದು ಕೊಲ್ಲಲಾಗಿದೆ. ಮಸೂದ್ ನನ್ನು ಹೊಡೆದು ಹಾಕಿದ್ದ ಯುವಕರು ಹಿಂದು ಸಂಘಟನೆಯ ಕಾರ್ಯಕರ್ತರು ಎನ್ನುವ ಆರೋಪವೂ ಕೇಳಿಬಂದಿತ್ತು. ಅದೇ ಘಟನೆಗೆ ಈಗ ಕಾಸರಗೋಡಿನಿಂದ ಬಂದಿದ್ದ ಯುವಕರು ಪ್ರತೀಕಾರ ತೀರಿಸಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.


ಪುತ್ತೂರಿನ ಆಸ್ಪತ್ರೆಯಲ್ಲಿ ಪ್ರವೀಣ್ ಅಸುನೀಗಿದ್ದಾರೆ. ವಿಷಯ ತಿಳಿಯುತ್ತಲೇ ಭಾರೀ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಪುತ್ತೂರು ನಗರ ಮತ್ತು ಬೆಳ್ಳಾರೆ ಪೇಟೆಯಲ್ಲಿ ಪೊಲೀಸರು ಅಂಗಡಿಗಳನ್ನು ಮುಚ್ಚಿಸಿದ್ದಾರೆ. ರಾತ್ರಿಯೇ ಉದ್ವಿಗ್ನ ಸ್ಥಿತಿ ನೆಲೆಸಿದೆ.
Bellare BJP leader Brutally murdered in Sullia. The deceased has been identified as Praveen. He was a BJP Yuva Morcha District Secretary. Revenge murder suspected. Recently a gang attacked a Mulsim youth brutally over a trivial reason in Kalenja of Bellare.
11-06-26 07:36 pm
HK News Staffer
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm