ಬ್ರೇಕಿಂಗ್ ನ್ಯೂಸ್
31-07-22 12:47 pm Mangalore Correspondent ಕ್ರೈಂ
ಮಂಗಳೂರು, ಜುಲೈ 31 : ಸುರತ್ಕಲ್ ನಲ್ಲಿ ಭೀಕರ ಹತ್ಯೆಗೊಳಗಾದ ಮಹಮ್ಮದ್ ಫಾಜಿಲ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲಕನನ್ನು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ನಿವಾಸಿ ಅಜಿತ್ ಡಿಸೋಜ ಬಂಧಿತನಾಗಿದ್ದು ಆತ ತನ್ನ ಹುಂಡೈ ಇಯೋನ್ ಕಾರನ್ನು ಬಾಡಿಗೆ ಕೊಟ್ಟಿದ್ದ. ಆರೋಪಿಗಳು ಕಾರನ್ನು ಪಡೆದು ಕೊಲೆ ಕೃತ್ಯ ಎಸಗಿದ್ದರು. ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಗಳನ್ನು ಆಧರಿಸಿ ಹುಂಡೈ ಇಯೋನ್ ಕಾರು ಎನ್ನುವುದು ತಿಳಿದುಬಂದಿತ್ತು. ಆದರೆ ಕಾರಿನ ನಂಬರ್ ಸ್ಪಷ್ಟವಾಗಿ ತಿಳಿದುಬಂದಿರಲಿಲ್ಲ. ಹೀಗಾಗಿ ಆ ಮಾಡೆಲಿನಲ್ಲಿ ಮಂಗಳೂರಿನಲ್ಲಿ ನೋಂದಣಿಯಾದ ಕಾರುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಹಲವರನ್ನು ವಿಚಾರಣೆಗೊಳಪಡಿಸಿದ್ದೆವೆ. ಎಂಟಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಕೆಲವನ್ನು ಸುರತ್ಕಲ್ ಠಾಣೆಯಲ್ಲಿ ಇರಿಸಲಾಗಿದೆ.



ಕೊನೆಗೆ, ಅಜಿತ್ ಡಿಸೋಜ ಕಾರನ್ನು ಬಾಡಿಗೆ ಕೊಡುವ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿತ್ತು. ಆತನ ಕಾರನ್ನು ಬಾಡಿಗೆ ಪಡೆದವರೇ ಕೃತ್ಯ ಎಸಗಿದ್ದರು ಎನ್ನೋದು ಖರೆಯಾಗುತ್ತಲೇ ಕಾರಿನ ಮಾಲಕನನ್ನು ಅರೆಸ್ಟ್ ಮಾಡಿದ್ದೇವೆ. ಆದರೆ ಕೃತ್ಯಕ್ಕೆ ಬಳಸಿದ್ದ ಕಾರು ಇನ್ನೂ ಪೊಲೀಸರ ವಶಕ್ಕೆ ಸಿಕ್ಕಿಲ್ಲ. ಅದು ಇನ್ನೂ ಆರೋಪಿಗಳ ಬಳಿಯೇ ಇರುವ ಶಂಕೆಯಿದೆ. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದು ಶೋಧ ನಡೆಸಲಾಗಿದೆ. ನಾವು ಬಂಧಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.


ಸದ್ಯಕ್ಕೆ ಬಂಧಿಸಿರುವ ಆರೋಪಿಯನ್ನು ಇನ್ನೂ ವಿಚಾರಣೆಗೆ ಒಳಪಡಿಸಲಿದ್ದು ಕೋರ್ಟಿಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುತ್ತೇವೆ. ಈತನಿಗೆ ಒಬ್ಬ ಆರೋಪಿಯ ಪರಿಚಯ ಇದೆ, ಆ ವ್ಯಕ್ತಿ ಯಾವಾಗಲೂ ಕಾರು ತೆಗೆದುಕೊಂಡು ಹೋಗುತ್ತಿದ್ದ. ಅದರ ಆಧಾರದಲ್ಲಿ ನಾವು ತನಿಖೆ ನಡೆಸ್ತೀವಿ. ಶೀಘ್ರದಲ್ಲೇ ಆರೋಪಿಗಳ ಬಂಧನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Surathkal Fazil Murder case, car owner Ajith Dsouza who had rented the car for the murder has been arrested Mangalore Police. The car is still missing as the accused have escaped using the car. The police are in search of the missing car and the accused.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm