ಬ್ರೇಕಿಂಗ್ ನ್ಯೂಸ್
31-07-22 12:47 pm Mangalore Correspondent ಕ್ರೈಂ
ಮಂಗಳೂರು, ಜುಲೈ 31 : ಸುರತ್ಕಲ್ ನಲ್ಲಿ ಭೀಕರ ಹತ್ಯೆಗೊಳಗಾದ ಮಹಮ್ಮದ್ ಫಾಜಿಲ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಮಾಲಕನನ್ನು ಬಂಧಿಸಿದ್ದಾರೆ.
ಸುರತ್ಕಲ್ ಬಳಿಯ ನಿವಾಸಿ ಅಜಿತ್ ಡಿಸೋಜ ಬಂಧಿತನಾಗಿದ್ದು ಆತ ತನ್ನ ಹುಂಡೈ ಇಯೋನ್ ಕಾರನ್ನು ಬಾಡಿಗೆ ಕೊಟ್ಟಿದ್ದ. ಆರೋಪಿಗಳು ಕಾರನ್ನು ಪಡೆದು ಕೊಲೆ ಕೃತ್ಯ ಎಸಗಿದ್ದರು. ಸಿಸಿಟಿವಿಯಲ್ಲಿ ದಾಖಲಾದ ದೃಶ್ಯಗಳನ್ನು ಆಧರಿಸಿ ಹುಂಡೈ ಇಯೋನ್ ಕಾರು ಎನ್ನುವುದು ತಿಳಿದುಬಂದಿತ್ತು. ಆದರೆ ಕಾರಿನ ನಂಬರ್ ಸ್ಪಷ್ಟವಾಗಿ ತಿಳಿದುಬಂದಿರಲಿಲ್ಲ. ಹೀಗಾಗಿ ಆ ಮಾಡೆಲಿನಲ್ಲಿ ಮಂಗಳೂರಿನಲ್ಲಿ ನೋಂದಣಿಯಾದ ಕಾರುಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಹಲವರನ್ನು ವಿಚಾರಣೆಗೊಳಪಡಿಸಿದ್ದೆವೆ. ಎಂಟಕ್ಕೂ ಹೆಚ್ಚು ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು. ಕೆಲವನ್ನು ಸುರತ್ಕಲ್ ಠಾಣೆಯಲ್ಲಿ ಇರಿಸಲಾಗಿದೆ.



ಕೊನೆಗೆ, ಅಜಿತ್ ಡಿಸೋಜ ಕಾರನ್ನು ಬಾಡಿಗೆ ಕೊಡುವ ಮಾಹಿತಿ ಪಡೆದು ವಿಚಾರಣೆ ನಡೆಸಲಾಗಿತ್ತು. ಆತನ ಕಾರನ್ನು ಬಾಡಿಗೆ ಪಡೆದವರೇ ಕೃತ್ಯ ಎಸಗಿದ್ದರು ಎನ್ನೋದು ಖರೆಯಾಗುತ್ತಲೇ ಕಾರಿನ ಮಾಲಕನನ್ನು ಅರೆಸ್ಟ್ ಮಾಡಿದ್ದೇವೆ. ಆದರೆ ಕೃತ್ಯಕ್ಕೆ ಬಳಸಿದ್ದ ಕಾರು ಇನ್ನೂ ಪೊಲೀಸರ ವಶಕ್ಕೆ ಸಿಕ್ಕಿಲ್ಲ. ಅದು ಇನ್ನೂ ಆರೋಪಿಗಳ ಬಳಿಯೇ ಇರುವ ಶಂಕೆಯಿದೆ. ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಸಿಕ್ಕಿದ್ದು ಶೋಧ ನಡೆಸಲಾಗಿದೆ. ನಾವು ಬಂಧಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.


ಸದ್ಯಕ್ಕೆ ಬಂಧಿಸಿರುವ ಆರೋಪಿಯನ್ನು ಇನ್ನೂ ವಿಚಾರಣೆಗೆ ಒಳಪಡಿಸಲಿದ್ದು ಕೋರ್ಟಿಗೆ ಹಾಜರುಪಡಿಸಿ ಕಸ್ಟಡಿಗೆ ಪಡೆಯುತ್ತೇವೆ. ಈತನಿಗೆ ಒಬ್ಬ ಆರೋಪಿಯ ಪರಿಚಯ ಇದೆ, ಆ ವ್ಯಕ್ತಿ ಯಾವಾಗಲೂ ಕಾರು ತೆಗೆದುಕೊಂಡು ಹೋಗುತ್ತಿದ್ದ. ಅದರ ಆಧಾರದಲ್ಲಿ ನಾವು ತನಿಖೆ ನಡೆಸ್ತೀವಿ. ಶೀಘ್ರದಲ್ಲೇ ಆರೋಪಿಗಳ ಬಂಧನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
Surathkal Fazil Murder case, car owner Ajith Dsouza who had rented the car for the murder has been arrested Mangalore Police. The car is still missing as the accused have escaped using the car. The police are in search of the missing car and the accused.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm