ಬ್ರೇಕಿಂಗ್ ನ್ಯೂಸ್
31-07-22 10:38 pm HK News Desk ಕ್ರೈಂ
ಕೊಲ್ಲಂ, ಜುಲೈ 31 : ಪಾರ್ಟಿಗಳಲ್ಲಿ ಬಳಕೆಯಾಗುವ ಎಂಡಿಎಂಎ ಡ್ರಗ್ಸ್ ಮತ್ತು ಸೆಕ್ಸ್ ಟಾಯ್ಸ್ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಯುವತಿ ಸಹಿತ ಐವರನ್ನು ಪತ್ತನಂತಿಟ್ಟ ಜಿಲ್ಲೆಯ ಪಂದಳಂ ನಗರದಲ್ಲಿ ಬಂಧಿಸಿದ್ದಾರೆ.
ಕೊಲ್ಲಂ ಜಿಲ್ಲೆಯ ಶಾಹಿನಾ ಪಳ್ಳಿಕಲ್, ಅಡೂರಿನ ರಾಹುಲ್ (ಮೊನೈ), ಪೆರಿಂಗನಾಡಿನ ಆರ್ಯನ್, ಪಂದಳಂನ ವಿಧು ಕೃಷ್ಣನ್ ಮತ್ತು ಕೊಡುಮೋನಿನ ಸಜಿನ್ ಬಂಧಿತರು. ಶುಕ್ರವಾರ ಸಂಜೆ ಶಾಹಿನಾ ಮತ್ತು ರಾಹುಲ್ ಪಂದಳಂನ ರಿವರ್ವಾಕ್ ಹೊಟೇಲ್ ಲಾಡ್ಜ್ನಲ್ಲಿ ರೂಂ ಬುಕ್ ಮಾಡಿದ್ದರು. ಇದೇ ವೇಳೆ ಕೆಲವು ಗ್ರಾಹಕರು ಅವರನ್ನು ಭೇಟಿ ಮಾಡಿದ್ದಾರೆ.

ಡ್ರಗ್ಸ್ ಮಾಫಿಯಾ ಮೇಲೆ ಮೊದಲೇ ಕಣ್ಣಿಟ್ಟಿದ್ದ ನಾರ್ಕೋಟಿಕ್ ಸೆಲ್ ಪೊಲೀಸರಿಗೆ ಕೆಲ ದಿನಗಳ ಹಿಂದೆಯಷ್ಟೇ ಬೆಂಗಳೂರಿನಿಂದ ಮಾದಕ ವಸ್ತುಗಳು ರವಾನೆಯಾಗಿರುವ ಖಚಿತ ಮಾಹಿತಿ ಲಭಿಸಿತ್ತು. ಹೀಗಾಗಿ ವಿಶೇಷ ತಂಡವನ್ನು ರಚಿಸಿ ಮಾದಕ ವಸ್ತುಗಳ ಜಾಲದ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು. ಅದರಂತೆ ರಿವರ್ವಾಕ್ ಲಾಡ್ಜ್ನಿಂದ ಡ್ರಗ್ಸ್ ಸಪ್ಲೈ ಆಗುತ್ತಿರುವ ಖಚಿತ ಮಾಹಿತಿ ಪಡೆದ ಜಿಲ್ಲಾ ಮಾದಕ ದ್ರವ್ಯ ನಿಗ್ರಹ ವಿಶೇಷ ಕಾರ್ಯಪಡೆ ಹೊಟೇಲ್ ಮೇಲೆ ದಾಳಿ ನಡೆಸಿದೆ.
ಕೊಠಡಿ ಪಡೆದಿದ್ದವರನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಎಂಡಿಎಂಎ ಮಾದಕ ಮಾತ್ರೆಗಳು ಹಾಗೂ ಸೆಕ್ಸ್ ಟಾಯ್ಸ್ಗಳು ರೂಂನಲ್ಲಿ ಪತ್ತೆಯಾಗಿದೆ. ತಂಡವು ಮಾದಕ ವಸ್ತುಗಳನ್ನು ಲಾಡ್ಜ್ನಿಂದ ಇತರೆಡೆಗೆ ರವಾನಿಸಲು ಪ್ಲ್ಯಾನ್ ರೂಪಿಸಿತ್ತು. ದಾಳಿ ವೇಳೆ ಅಪಾರ ಪ್ರಮಾಣದ ಎಂಡಿಎಂಎ ಡ್ರಗ್ಸ್ ಸಿಕ್ಕಿರುವುದಾಗಿ ನಾರ್ಕೋಟಿಕ್ ಸೆಲ್ ಡಿವೈಎಸ್ಪಿ ಕೆಎ ವಿದ್ಯಾಧರನ್ ತಿಳಿಸಿದ್ದಾರೆ.
ಆರೋಪಿಗಳೆಲ್ಲರೂ ಡ್ರಗ್ಸ್ ಡೀಲರ್ಗಳಾಗಿದ್ದು, ಎಂಡಿಎಂಎ ಅನ್ನು ಬೆಂಗಳೂರಿನಿಂದ ತರಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಮಾರಾಟಕ್ಕೂ ಮುನ್ನ ಪಂದಳಂನಲ್ಲಿರುವ ಹೋಟೆಲ್ ಕೊಠಡಿಗೆ ಮಾದಕ ದ್ರವ್ಯಗಳನ್ನು ಕಳ್ಳಸಾಗಣೆ ಮಾಡಲು ಯೋಜನೆ ರೂಪಿಸಲಾಗಿತ್ತು. ಅದರ ಜೊತೆಗೆ ಸೆಕ್ಸ್ ಟಾಯ್ಸ್ಗಳನ್ನು ಇದೇ ತಂಡ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಯಾರಿಗೂ ಅನುಮಾನ ಮೂಡಬಾರದೆಂಬ ಉದ್ದೇಶದಿಂದ, ಲಾಡ್ಜ್ನಲ್ಲಿ ರೂಮ್ ಬುಕ್ ಮಾಡಿದಾಗ ಶಾಹಿನಾಳನ್ನು ಜೊತೆಗೆ ಕರೆದುಕೊಂಡು ಬಂದಿದ್ದಾಗಿ ಆರೋಪಿಗಳು ಪ್ರಾಥಮಿಕ ತನಿಖೆಯ ವೇಳೆ ಬಾಯಿಬಿಟ್ಟಿದ್ದಾರೆ.
Police on Saturday arrested five persons, including a woman, for selling party drug MDMA and sex toys from a hotel room in Pandalam here. The narcotics were seized from Riverwalk Hotel, near Manikandan Althara in Pandalam, on Saturday afternoon by a District Anti-Narcotics Special Action Force (DANSAF) team led by Narcotics Cell Deputy Superintendent of Police K A Vidyadharan.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm