ಬ್ರೇಕಿಂಗ್ ನ್ಯೂಸ್
08-08-22 10:20 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 8: ಹಿಂದು ಸಂಘಟನೆಯ ಕಾರ್ಯಕರ್ತರನ್ನು ಹಿಂಬಾಲಿಸುವುದು, ಇಂಟರ್ನೆಟ್ ಕರೆ ಮಾಡಿ ಜೀವ ಬೆದರಿಕೆ ಒಡ್ಡುವ ಕೃತ್ಯಗಳು ಮರುಕಳಿಸುತ್ತಿವೆ. ಈ ಬಗ್ಗೆ ಹಿಂದು ಸಂಘಟನೆ ಕಾರ್ಯಕರ್ತರೊಬ್ಬರು ತನಗೆ ಬಂದ ಬೆದರಿಕೆ ಕರೆ ಬಗ್ಗೆ ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 10.30ಕ್ಕೆ ಪಂಪ್ವೆಲ್ ನಿಂದ ಕಾರಿನಲ್ಲಿ ಬಿಕರ್ನಕಟ್ಟೆಯ ತನ್ನ ಮನೆಗೆ ಹೋಗುತ್ತಿದ್ದಾಗ ಬೈಕಿನಲ್ಲಿ ಇಬ್ಬರು ಯುವಕರು ಹಿಂಬಾಲಿಸಿದ್ದಾರೆ. ಮನೆಗೆ ಮುಟ್ಟುವಷ್ಟರಲ್ಲಿ ಇಂಟರ್ನೆಟ್ ಕರೆ ಬಂದಿದ್ದು ನೀನು ಈ ಬಾರಿ ಬಚಾವಾಗಿದ್ದೀಯಾ.. ನಾವು ಬಿಡೋದಿಲ್ಲ. ನೀನು ಸೇರಿ ಮೂವರಿಗೆ ಸ್ಕೆಚ್ ಹಾಕಿದ್ದೇವೆ. ಇವತ್ತಲ್ಲ ನಾಳೆ, ತೆಗೆದೇ ಬಿಡುತ್ತೇವೆ ಎಂದು ತುಳು ಭಾಷೆಯಲ್ಲಿ ಬೆದರಿಕೆ ಹಾಕಿದ್ದಾರೆ ಎಂದು ಕಂಕನಾಡಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಜೀವ ಬೆದರಿಕೆ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ.
ಎರಡು ದಿನಗಳ ಹಿಂದೆ ಬಳ್ಳಾಲ್ ಬಾಗಿನ ಕಾರ್ಯಕರ್ತನಿಗೂ ಇದೇ ರೀತಿ ಬೆದರಿಕೆ ಕರೆ ಬಂದಿತ್ತು. ಕರೆ ಮಾಡಿ, ತುಳು ಭಾಷೆಯಲ್ಲಿ ನಿಂದಿಸಿದ್ದಲ್ಲದೆ, ನಿನ್ನನ್ನು ತೆಗೆಯದೇ ಬಿಡಲ್ಲ ಎಂದು ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿದ್ದ ಆಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು.
ಕಳೆದ ವಾರದ ಉಳ್ಳಾಲ ಠಾಣೆಯಲ್ಲಿ ತನ್ನನ್ನು ಹಿಂಬಾಲಿಸಿಕೊಂಡು ಬಂದ ಬಗ್ಗೆ ವ್ಯಕ್ತಿಯೊಬ್ಬರು ದೂರು ನೀಡಲು ಬಂದಿದ್ದರು. ಕೊನೆಗೆ, ಪೊಲೀಸರು ವಿಚಾರಣೆ ನಡೆಸಿದಾಗ ತಡಬಡಾಯಿಸಿದ್ದರಿಂದ ಸುಳ್ಳು ದೂರೆಂದು ಪರಿಗಣಿಸಿ ಆತನ ವಿರುದ್ಧವೇ ದೂರು ದಾಖಲಿಸಿದ್ದರು.
Mangalore Hindu activist gets life threat via internet call, says we will surely kill you, A case has been registered at Kankanady Town Police Station. We have already targeted three to kill we will kill you also.
11-06-26 01:53 pm
HK News Staffer
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm