ಬ್ರೇಕಿಂಗ್ ನ್ಯೂಸ್
09-08-22 01:38 pm HK News Desk ಕ್ರೈಂ
ಲಖನೌ, ಆಗಸ್ಟ್ 9: ಪ್ರಿಯಕರನ ಕತ್ತು ಸೀಳಿ ಕೊಲೆ ಮಾಡಿ, ಮೃತದೇಹವನ್ನು ಟ್ರಾಲಿ ಬ್ಯಾಗ್ನಲ್ಲು ತುಂಬಿ ಸಾಗಿಸುತ್ತಿದ್ದ ಆರೋಪಿ ಮಹಿಳೆಯನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ಪ್ರಿಯಕರನ್ನು 22 ವರ್ಷದ ಫಿರೋಜ್ ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ಕ್ಷೌರಿಕನಾಗಿದ್ದ. 36 ವರ್ಷದ ಪ್ರೇಯಸಿ ಪ್ರೀತಿ ಶರ್ಮಾ ಎಂಬಾಕೆಯಿಂದ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಮದುವೆ ಆಗಲು ನಿಕಾರಿಸಿದ್ದಕ್ಕೆ ಪ್ರೀತಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪ್ರೀತಿ ಮತ್ತು ಫಿರೋಜ್ ಕಳೆದ 4 ವರ್ಷಗಳಿಂದ ಒಟ್ಟಿಗೆ ಬಾಳುತ್ತಿದ್ದರು ಅಂದರೆ, ಲಿವಿಂಗ್ ರಿಲೇಶನ್ ಶಿಪ್ ನಲ್ಲಿದ್ದರು. ಪ್ರೀತಿಗೆ ಈಗಾಗಲೇ ಮದುವೆ ಆಗಿದ್ದು, ಮಕ್ಕಳ ಸಾವಿನ ಬಳಿಕ ಗಂಡನಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ ಆಕೆಗೆ ಫಿರೋಜ್ ಪರಿಚಯವಾಗಿದೆ. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿ ಒಟ್ಟಿಗೆ ವಾಸಿಸುತ್ತಿದ್ದರು. ಆದರೆ, ಪ್ರೀತಿ ಮದುವೆ ಆಗುವಂತೆ ದುಂಬಾಲು ಬಿದ್ದಾಗ, ಮದುವೆ ಆಗಲು ಫಿರೋಜ್ ನಿರಾಕರಿಸುತ್ತಿದ್ದ. ಕೋಮುಗಲಭೆಗೆ ಕಾರಣವಾಗಬಹುದು ಎಂಬ ಕಾರಣ ನೀಡಿ ಮದುವೆಗೆ ನಿರಾಕರಿಸುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಾಗ, ತಾಳ್ಮೆ ಕಳೆದುಕೊಂಡ ಪ್ರೀತಿ, ರೇಜರ್ ತೆಗೆದುಕೊಂಡು ಫಿರೋಜ್ ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಬಳಿಕ ದೊಡ್ಡದಾಗ ಟ್ರಾಲಿ ಬ್ಯಾಗ್ ತೆಗೆದುಕೊಂಡು ಮೃಹದೇಹವನ್ನು ಬೀಸಾಡಿ ಬರಲು ಹೋದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ.
ಸುಮಾರು ಒಂದು ದಿನಗಳ ಕಾಲ ಮೃತದೇಹವಿದ್ದ ಬ್ಯಾಗ್ ಅನ್ನು ಅಪಾರ್ಟ್ಮೆಂಟ್ ಒಳಗೆ ಇಟ್ಟಿದ್ದಳು. ಜನಜಂಗುಳಿ ಇರುವ ಪ್ರದೇಶದಲ್ಲಿ ಎಸೆದು ಬರಲು ಯತ್ನಿಸುತ್ತಿದ್ದಳು. ಆದರೆ, ಅದೇ ಏರಿಯಾದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸರು ಅನುಮಾನಗೊಂಡು ಆಕೆಯನ್ನು ತಡೆದು ಪ್ರಶ್ನಿಸಿದ್ದಾರೆ. ಅಲ್ಲದೆ, ಬ್ಯಾಗ್ ಓಪನ್ ಮಾಡುವಂತೆ ಕೇಳಿದ್ದಾರೆ. ಮೃತದೇಹ ಇದ್ದುದ್ದನ್ನು ನೋಡಿ ಆಕೆಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರಂಭದಲ್ಲಿ ಇದೊಂದು ಅಪಘಾತ ಎಂದು ಹೇಳಿದ್ದ ಪ್ರೀತಿ, ಕೊನೆಗೆ ತಪ್ಪು ಒಪ್ಪಿಕೊಂಡು ಜೈಲು ಪಾಲಾಗಿದ್ದಾಳೆ.
Ghaziabad Police has arrested a woman identified as Preeti Sharma for allegedly killing her live-in partner identified as a barber Firoz. Police said Sharma killed Firoz by slitting his throat with a razor. She was arrested by the Police while attempting to dispose of the body that she had stuffed in a trolley bag. She was planning to leave the dead body-stuffed suitcase on a train.
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 02:51 pm
Mangalore Correspondent
SIT, Sujata Bhat, Dharmasthala Case: ಕೇಸ್ ಹಿಂ...
28-08-25 11:27 am
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm