ಬ್ರೇಕಿಂಗ್ ನ್ಯೂಸ್
12-08-22 07:50 pm HK News Desk ಕ್ರೈಂ
ರಾಮನಗರ, ಆಗಸ್ಟ್ 12 : ಅಜ್ಜಿಯೊಬ್ಬರು ಮೊಮ್ಮಗಳ ಹೆಸರಿನಲ್ಲಿ ಬ್ಯಾಂಕ್ನಲ್ಲಿ ಠೇವಣಿಯಿಟ್ಟಿದ್ದ ಹಣವನ್ನು ನಕಲಿ ದಾಖಲೆ ಹಾಗೂ ನಕಲಿ ಮೊಮ್ಮಗಳನ್ನು ಬ್ಯಾಂಕಿಗೆ ತೋರಿಸಿ ಕಬಳಿಸಿದ ಪ್ರಕರಣ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ನಡೆದಿದೆ.
ರಾಮನಹಳ್ಳಿಯ ವೃದ್ಧೆ ನಂಜಮ್ಮ ಎಂಬವರು ಬಿಡದಿಯ ಕೆನರಾ ಬ್ಯಾಂಕ್ನಲ್ಲಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ 5 ಲಕ್ಷ ರೂ. ಠೇವಣಿ ಇಟ್ಟಿದ್ದರು. ಕೆಲವು ಸಮಯದ ಬಳಿಕ ನಂಜಮ್ಮ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಅಜ್ಜಿಯ ಸಂಬಂಧಿಕರಾಗಿದ್ದ ರತ್ಮಮ್ಮ ಮತ್ತು ಜಗದೀಶ್ ಎಂಬವರು ಬ್ಯಾಂಕ್ಗೆ ಜ್ಞಾನೇಶ್ವರಿ ಹೆಸರಲ್ಲಿ ಬಾಲಕಿಯನ್ನು ಕರೆತಂದಿದ್ದು ತಮ್ಮದೇ ಮಗಳು ಜ್ಞಾನೇಶ್ವರಿ. ತಾಯಿ ನಂಜಮ್ಮ ತೀರಿಕೊಂಡಿದ್ದಾರೆಂದು ಜಗದೀಶ್ ದಾಖಲೆ ತೋರಿಸಿದ್ದರು. ಅಲ್ಲದೆ, ಠೇವಣಿ ಹಣಕ್ಕೆ ಜ್ಞಾನೇಶ್ವರಿ ತಂದೆಯಾದ ತನ್ನನ್ನು ಮೈನರ್ ಗಾರ್ಡಿಯನ್ ಆಗಿಸಿ, ಜಂಟಿ ಖಾತೆಯಲ್ಲಿ ಠೇವಣಿ ವರ್ಗಾವಣೆ ಮಾಡಲು ಹೇಳಿದ್ದರು. ಅಲ್ಲದೆ ನಂಜಮ್ಮರ ಮರಣ ಪ್ರಮಾಣಪತ್ರ, ಠೇವಣಿ ಹಣದ ಬಾಂಡ್ ನಂಬರ್ ಸಹಿತ ದಾಖಲೆಗಳನ್ನು ಬ್ಯಾಂಕ್ಗೆ ನೀಡಿದ್ದರು. ಇದರ ಆಧಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿದ ಬ್ಯಾಂಕ್ ಸಿಬ್ಬಂದಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ ನಂಜಮ್ಮ ಇಟ್ಟಿದ್ದ 5 ಲಕ್ಷ ರೂ.ಗಳನ್ನು ಜಗದೀಶ್ ಅವರ ಹೆಸರಿನಲ್ಲಿ ತೆರೆದಿದ್ದ ಜಂಟಿ ಉಳಿತಾಯ ಖಾತೆಗೆ 2022ರ ಜೂನ್ 23ರಂದು ವರ್ಗಾವಣೆ ಮಾಡಿದ್ದರು.
ಇದಾದ ನಂತರ 2022ರ ಜುಲೈ 1ರಂದು ಮೃತ ನಂಜಮ್ಮ ಅವರ ಮಗ ಚಂದ್ರಶೇಖರ್ ಬ್ಯಾಂಕ್ಗೆ ಬಂದು ತನ್ನ ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ ತಾಯಿ ಇಟ್ಟಿರುವ ಠೇವಣಿ ಹಣದ ಬಗ್ಗೆ ವಿಚಾರಿಸಿದ್ದರು. ಬ್ಯಾಂಕ್ ಸಿಬ್ಬಂದಿ ದಾಖಲೆ ಪರಿಶೀಲಿಸಿದಾಗ, ಇದಕ್ಕೂ ಹಿಂದೆ ರತ್ನಮ್ಮ ಹಾಗೂ ಜಗದೀಶ್ ಅವರು ಬ್ಯಾಂಕ್ಗೆ ಸಲ್ಲಿಸಿದ್ದ ದಾಖಲೆಗಳು ನಕಲಿ ಅಲ್ಲದೆ, ಬ್ಯಾಂಕ್ಗೆ ಕರೆತಂದಿದ್ದ ಜ್ಞಾನೇಶ್ವರಿಯೂ ನಕಲಿ ಎಂದು ಗೊತ್ತಾಗಿದೆ. ರತ್ನಮ್ಮ ಹಾಗೂ ಜಗದೀಶ್ ಮೋಸ ಎಸಗಿರುವ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಕೇಶವಮೂರ್ತಿ ಬಿಡದಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Family loot Rs 5 lakhs by showing fake grand daughter in the bank at Ramnagara.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm