ಬ್ರೇಕಿಂಗ್ ನ್ಯೂಸ್
13-08-22 09:17 pm HK News Desk ಕ್ರೈಂ
ಹಾಸನ, ಆಗಸ್ಟ್ 13: ಕೋರ್ಟ್ ಆವರಣದಲ್ಲೇ ತನ್ನ ಪತ್ನಿಯ ಕತ್ತನ್ನೇ ಕೊಯ್ದು ಗಂಡನೇ ಬರ್ಬರವಾಗಿ ಹತ್ಯೆಗೈದ ಭಯಾನಕ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶನಿವಾರ ನಡೆದಿದೆ. ಪತ್ನಿ ಚೈತ್ರಾಳನ್ನು ಕೊಂದ ಆರೋಪಿ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್, ಹೊನಮಾರನಹಳ್ಳಿ ಗ್ರಾಮದ ನಿವಾಸಿ ಚೈತ್ರಾಳನ್ನು 7 ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಇದೇ ವಿಚಾರದಲ್ಲಿ ಕೊರೊನಾ ಲಾಕ್ಡೌನ್ ವೇಳೆ ಭಾರೀ ಗಲಾಟೆ ಆಗಿತ್ತು. ಚೈತ್ರಾಳ ಸರ, ಕಿವಿಯೋಲೆ ಕಿತ್ತುಕೊಂಡು ಗಂಡನೇ ಹಲ್ಲೆ ಮಾಡಿದ್ದ. ಗಂಡನ ಕಾಟ ತಾಳಲಾರದೆ ಚೈತ್ರಾ ತವರು ಮನೆಯಲ್ಲೇ ಇದ್ದಳು. ಇತ್ತೀಚೆಗೆ ಗಂಡನಿಂದ ವಿಚ್ಚೇದನ ಕೋರಿ ಚೈತ್ರಾ ಕೋರ್ಟ್ ಮೆಟ್ಟಿಲೇರಿದ್ದಳು. ಆದರೆ ಅಲ್ಲಿಗೆ ಬಂದಿದ್ದ ಶಿವಕುಮಾರ್, ಕೋರ್ಟ್ ಆವರಣದಲ್ಲಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಪುಟ್ಟ ಮಕ್ಕಳಿಗೆ ತಾಯಿ ಇಲ್ಲದಂಗೆ ಮಾಡಿಬಿಟ್ಟ ಎಂದು ಚೈತ್ರಾಳ ಚಿಕ್ಕಮ್ಮ ಆಸ್ಪತ್ರೆಯ ಶವಾಗಾರದ ಬಳಿ ಗೋಳಾಡುತ್ತಿದ್ದರು. ಗಂಡನಿಂದ ವಿಚ್ಚೇದನ ಮತ್ತು ಜೀವನಾಂಶ ಕೋರಿ ಚೈತ್ರಾ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಶನಿವಾರ ಹೊಳೆನರಸೀಪುರ ಕೋರ್ಟ್ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12.30ರ ಸುಮಾರಿಗೆ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ್, ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಚೈತ್ರಾಳನ್ನು ಕೂಡಲೇ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದರೂ ಬದುಕಲಿಲ್ಲ.
ಇತ್ತ ಚೈತ್ರಾಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಗತ್ತಿನ ಪರಿವೆ ಇಲ್ಲದ ಪುಟ್ಟ ಮಕ್ಕಳು ಸಂಬಂಧಿಕರ ಗೋಳಾಟ ನೋಡಿ ಮಂಕಾಗಿದ್ದಾರೆ.
A man murdered his estranged wife inside a court premises in Holenarasipur town on Saturday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm