ಬ್ರೇಕಿಂಗ್ ನ್ಯೂಸ್
13-08-22 09:17 pm HK News Desk ಕ್ರೈಂ
ಹಾಸನ, ಆಗಸ್ಟ್ 13: ಕೋರ್ಟ್ ಆವರಣದಲ್ಲೇ ತನ್ನ ಪತ್ನಿಯ ಕತ್ತನ್ನೇ ಕೊಯ್ದು ಗಂಡನೇ ಬರ್ಬರವಾಗಿ ಹತ್ಯೆಗೈದ ಭಯಾನಕ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಶನಿವಾರ ನಡೆದಿದೆ. ಪತ್ನಿ ಚೈತ್ರಾಳನ್ನು ಕೊಂದ ಆರೋಪಿ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್, ಹೊನಮಾರನಹಳ್ಳಿ ಗ್ರಾಮದ ನಿವಾಸಿ ಚೈತ್ರಾಳನ್ನು 7 ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡೂ ಮಕ್ಕಳು ಹೆಣ್ಣು ಎಂಬ ಕಾರಣಕ್ಕೆ ಪತ್ನಿಗೆ ಚಿತ್ರಹಿಂಸೆ ಕೊಡುತ್ತಿದ್ದ. ಇದೇ ವಿಚಾರದಲ್ಲಿ ಕೊರೊನಾ ಲಾಕ್ಡೌನ್ ವೇಳೆ ಭಾರೀ ಗಲಾಟೆ ಆಗಿತ್ತು. ಚೈತ್ರಾಳ ಸರ, ಕಿವಿಯೋಲೆ ಕಿತ್ತುಕೊಂಡು ಗಂಡನೇ ಹಲ್ಲೆ ಮಾಡಿದ್ದ. ಗಂಡನ ಕಾಟ ತಾಳಲಾರದೆ ಚೈತ್ರಾ ತವರು ಮನೆಯಲ್ಲೇ ಇದ್ದಳು. ಇತ್ತೀಚೆಗೆ ಗಂಡನಿಂದ ವಿಚ್ಚೇದನ ಕೋರಿ ಚೈತ್ರಾ ಕೋರ್ಟ್ ಮೆಟ್ಟಿಲೇರಿದ್ದಳು. ಆದರೆ ಅಲ್ಲಿಗೆ ಬಂದಿದ್ದ ಶಿವಕುಮಾರ್, ಕೋರ್ಟ್ ಆವರಣದಲ್ಲಿಯೇ ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಪುಟ್ಟ ಮಕ್ಕಳಿಗೆ ತಾಯಿ ಇಲ್ಲದಂಗೆ ಮಾಡಿಬಿಟ್ಟ ಎಂದು ಚೈತ್ರಾಳ ಚಿಕ್ಕಮ್ಮ ಆಸ್ಪತ್ರೆಯ ಶವಾಗಾರದ ಬಳಿ ಗೋಳಾಡುತ್ತಿದ್ದರು. ಗಂಡನಿಂದ ವಿಚ್ಚೇದನ ಮತ್ತು ಜೀವನಾಂಶ ಕೋರಿ ಚೈತ್ರಾ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಶನಿವಾರ ಹೊಳೆನರಸೀಪುರ ಕೋರ್ಟ್ಗೆ ಚೈತ್ರಾ ಆಗಮಿಸಿದ್ದರು. ಮಧ್ಯಾಹ್ನ 12.30ರ ಸುಮಾರಿಗೆ ಕೋರ್ಟ್ ಆವರಣದ ಶೌಚಗೃಹಕ್ಕೆ ಚೈತ್ರಾ ತೆರಳಿದ್ದಾಗ ಹೊಂಚುಹಾಕಿ ಕಾಯುತ್ತಿದ್ದ ಶಿವಕುಮಾರ್, ಆಕೆಯ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಚೈತ್ರಾಳನ್ನು ಕೂಡಲೇ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದರೂ ಬದುಕಲಿಲ್ಲ.
ಇತ್ತ ಚೈತ್ರಾಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಗತ್ತಿನ ಪರಿವೆ ಇಲ್ಲದ ಪುಟ್ಟ ಮಕ್ಕಳು ಸಂಬಂಧಿಕರ ಗೋಳಾಟ ನೋಡಿ ಮಂಕಾಗಿದ್ದಾರೆ.
A man murdered his estranged wife inside a court premises in Holenarasipur town on Saturday.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm