ಬ್ರೇಕಿಂಗ್ ನ್ಯೂಸ್
05-10-20 10:48 am Mangalore Correspondent ಕ್ರೈಂ
ಮಂಗಳೂರು, ಅಕ್ಟೋಬರ್ 5: ನಶೆ ಏರಿಸಿಕೊಳ್ಳೋಕೆ ಗಾಂಜಾ ಕಡ್ಡಿಗಳನ್ನು ಬಳಸುವುದನ್ನು ಕೇಳಿದ್ದೇವೆ. ಆದರೆ ಗಾಂಜಾ ಎಣ್ಣೆ ಬಳಕೆ ಬಗ್ಗೆ ಕೇಳಿದ್ದೀರಾ? ನಶೆ ಏರಿಸಿಕೊಳ್ಳಲು ಗಾಂಜಾವನ್ನು ಎಣ್ಣೆ ರೂಪದಲ್ಲಿ ಬಳಸುತ್ತಿರುವ ಪ್ರಕರಣ ಇದೇ ಮೊದಲ ಬಾರಿಗೆ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ.
ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಸರ್ಕಲ್ ಟಿ.ಡಿ ನಾಗರಾಜ್ ನೇತೃತ್ವದ ತಂಡ ಬಂಧಿತನಿಂದ ಸುಮಾರು 80 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಎಣ್ಣೆಯನ್ನು ವಶಕ್ಕೆ ಪಡೆದಿದೆ. ಬಂಧಿತನನ್ನು ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಎಂದು ಗುರುತಿಸಲಾಗಿದೆ. ಆತನಿಂದ ಸುಮಾರು 300 ಗ್ರಾಂ ತೂಕದ ಗಾಂಜಾ ಎಣ್ಣೆ, 40 ಗ್ರಾಂ ಮೊಗ್ಗು ಕಾಯಿ ಮಿಶ್ರಿತ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.

ಗಾಂಜಾ ಎಣ್ಣೆ ಅತಿ ಹೆಚ್ಚು ಬೆಲೆಯುಳ್ಳಂಥದ್ದು. ಅರ್ಧ ಕೆಜಿ ಎಣ್ಣೆಗೆ ಒಂದು ಲಕ್ಷಕ್ಕಿಂತ ಹೆಚ್ಚು ಬೆಲೆ ಇದೆ ಎನ್ನುತ್ತಾರೆ ಪೊಲೀಸರು. ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಗಾಂಜಾ ಎಣ್ಣೆ ತೆಗೆಯುವ ಜಾಲ ಇದ್ದು ಆರೋಪಿ ಅಬ್ದುಲ್ ಖಾದರ್ ಅಲ್ಲಿಂದ ಗಾಂಜಾ ತರಿಸಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಗಾಂಜಾವನ್ನು ಎಣ್ಣೆಯ ರೂಪದಲ್ಲಿ ಬಳಕೆ ಮಾಡುವ ಪ್ರಕರಣ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬೆಳಕಿಗೆ ಬಂದಿದೆ. ಉಳಿದಂತೆ ಗಾಂಜಾದಿಂದ ಎಣ್ಣೆ ತೆಗೆಯುವುದು ಅತ್ಯಂತ ದುಬಾರಿ ಮತ್ತು ಅಪರೂಪದ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm