ಬ್ರೇಕಿಂಗ್ ನ್ಯೂಸ್
17-08-22 10:25 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಕೃತ್ಯದ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಉಳಿದುಕೊಳ್ಳಲು ಅವಕಾಶ ನೀಡಿದ ಬಂಟ್ವಾಳ ನಿವಾಸಿ ಹರ್ಷಿತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನೂ ವಶಕ್ಕೆ ಪಡೆಯಲಾಗಿದೆ.
ಜುಲೈ 28ರಂದು ರಾತ್ರಿ 8.30ರ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ಕೊಲೆ ಕೃತ್ಯ ನಡೆದಿತ್ತು. ವಾಚ್ ಖರೀದಿಸಲೆಂದು ಸುರತ್ಕಲ್ ಪೇಟೆಗೆ ಬಂದಿದ್ದ ಫಾಜಿಲ್ ನನ್ನು ಅಟ್ಟಾಡಿಸಿದ್ದು, ಬಟ್ಟೆ ಅಂಗಡಿಗೆ ನುಗ್ಗಿದ್ದಾಗ ಅದರೊಳಗೆ ಹೋಗಿ ತಲವಾರಿನಲ್ಲಿ ಕಡಿದು ಕೊಲೆಗೈದಿದ್ದರು. ಪ್ರಕರಣದಲ್ಲಿ ನಾಲ್ಕೇ ದಿನದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಏಳು ಮಂದಿಯೂ ಕೃತ್ಯದಲ್ಲಿ ನೇರ ಶಾಮೀಲಾಗಿದ್ದರು. ಬೆಳ್ಳಾರೆಯ ಪ್ರವೀಣ್ ಹತ್ಯೆಗೆ ಪ್ರತೀಕಾರಕ್ಕಾಗಿ ಕೊಲೆ ನಡೆಸಿದ್ದರು. ಹ್ಯುಂಡೈ ಇಯೋನ್ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದು, ಆನಂತರ ಕಾರನ್ನು ಕಾರ್ಕಳ ತಾಲೂಕಿನ ಇನ್ನಾದಲ್ಲಿ ಬಿಟ್ಟು ಹೋಗಿದ್ದರು. ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು. ಇದೀಗ ಅಲ್ಲಿಂದ ಪರಾರಿಯಾಗಲು ಬಳಸಿದ್ದ ಕಾರು ಮತ್ತು ಅದಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
Mangalore One more person has been arrested in connection with the murder of Fazil in Surathkal on July 28. The accused has been identified as Harshith (28) from Bantwal
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm