ಬ್ರೇಕಿಂಗ್ ನ್ಯೂಸ್
17-08-22 10:25 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 17: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಕೃತ್ಯದ ಬಳಿಕ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದೊಯ್ದು ಉಳಿದುಕೊಳ್ಳಲು ಅವಕಾಶ ನೀಡಿದ ಬಂಟ್ವಾಳ ನಿವಾಸಿ ಹರ್ಷಿತ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನೂ ವಶಕ್ಕೆ ಪಡೆಯಲಾಗಿದೆ.
ಜುಲೈ 28ರಂದು ರಾತ್ರಿ 8.30ರ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ಕೊಲೆ ಕೃತ್ಯ ನಡೆದಿತ್ತು. ವಾಚ್ ಖರೀದಿಸಲೆಂದು ಸುರತ್ಕಲ್ ಪೇಟೆಗೆ ಬಂದಿದ್ದ ಫಾಜಿಲ್ ನನ್ನು ಅಟ್ಟಾಡಿಸಿದ್ದು, ಬಟ್ಟೆ ಅಂಗಡಿಗೆ ನುಗ್ಗಿದ್ದಾಗ ಅದರೊಳಗೆ ಹೋಗಿ ತಲವಾರಿನಲ್ಲಿ ಕಡಿದು ಕೊಲೆಗೈದಿದ್ದರು. ಪ್ರಕರಣದಲ್ಲಿ ನಾಲ್ಕೇ ದಿನದಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಏಳು ಮಂದಿಯೂ ಕೃತ್ಯದಲ್ಲಿ ನೇರ ಶಾಮೀಲಾಗಿದ್ದರು. ಬೆಳ್ಳಾರೆಯ ಪ್ರವೀಣ್ ಹತ್ಯೆಗೆ ಪ್ರತೀಕಾರಕ್ಕಾಗಿ ಕೊಲೆ ನಡೆಸಿದ್ದರು. ಹ್ಯುಂಡೈ ಇಯೋನ್ ಕಾರಿನಲ್ಲಿ ಬಂದು ಕೃತ್ಯ ಎಸಗಿದ್ದು, ಆನಂತರ ಕಾರನ್ನು ಕಾರ್ಕಳ ತಾಲೂಕಿನ ಇನ್ನಾದಲ್ಲಿ ಬಿಟ್ಟು ಹೋಗಿದ್ದರು. ಅಲ್ಲಿಂದ ಬೇರೆ ಕಾರಿನಲ್ಲಿ ಪರಾರಿಯಾಗಿದ್ದರು ಎನ್ನುವುದು ತನಿಖೆಯಲ್ಲಿ ಕಂಡುಬಂದಿತ್ತು. ಇದೀಗ ಅಲ್ಲಿಂದ ಪರಾರಿಯಾಗಲು ಬಳಸಿದ್ದ ಕಾರು ಮತ್ತು ಅದಕ್ಕೆ ಸಹಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
Mangalore One more person has been arrested in connection with the murder of Fazil in Surathkal on July 28. The accused has been identified as Harshith (28) from Bantwal
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm