ಬ್ರೇಕಿಂಗ್ ನ್ಯೂಸ್
05-10-20 12:57 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 5: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಮಹಿಳೆಯ ಸಾವಿನ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ಎದ್ದಿರುವ ನಡುವಲ್ಲೇ 25ರ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ ಮತ್ತೊಂದು ಪ್ರಕರಣ ರಾಜಧಾನಿ ದೆಹಲಿ ಹೊರವಲಯದ ಗುರುಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಯ ತಲೆಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿಲ್ಲಿಯಲ್ಲಿ ವಾಸವಿದ್ದ ಈ ಮಹಿಳೆ ರಾತ್ರಿ 1:30ರ ಸುಮಾರಿಗೆ ಸಿಕಂದರಪುರ ಮೆಟ್ರೋ ಸ್ಟೇಷನ್ ಬಳಿ ನಿಂತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನ ಬೈಕ್ನಲ್ಲಿ ಡಿಎಲ್ಎಫ್ 2ನೇ ಹಂತದಲ್ಲಿದ್ದ ಆತನ ಕಚೇರಿಗೆ ಮಹಿಳೆ ತೆರಳಿದ್ದಾಳೆ. ಕಚೇರಿಗೆ ತಲುಪಿದಾಗ ಆರೋಪಿಯ ಮೂವರು ಸ್ನೇಹಿತರು ಅಲ್ಲಿದ್ದರು. ಹೀಗಾಗಿ ಮುಜುಗರ ಅನುಭವಿಸಿದ ಮಹಿಳೆ ಅಲ್ಲಿಂದ ಹೊರಡಲು ಮುಂದಾಗಿದ್ದು ಆರೋಪಿಗಳು ಬಲವಂತವಾಗಿ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಹಿಳೆಯ ತೀವ್ರ ವಿರೋಧದ ನಡುವೆಯೂ ನಾಲ್ಕು ಮಂದಿ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದರು ಎಂದು ಸಂತ್ರಸ್ತೆಯ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ. ಮಹಿಳೆಗೆ ಹಲ್ಲೆಗೈದು ಗೋಡೆ ಹಾಗೂ ನೆಲಕ್ಕೆ ತಲೆಯನ್ನು ಚಚ್ಚಿದ್ದಾರೆ.
ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸಂತ್ರಸ್ತೆಯನ್ನು ನೋಡಿದ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am