ಬ್ರೇಕಿಂಗ್ ನ್ಯೂಸ್
05-10-20 12:57 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 5: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಮಹಿಳೆಯ ಸಾವಿನ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ಎದ್ದಿರುವ ನಡುವಲ್ಲೇ 25ರ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ ಮತ್ತೊಂದು ಪ್ರಕರಣ ರಾಜಧಾನಿ ದೆಹಲಿ ಹೊರವಲಯದ ಗುರುಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಯ ತಲೆಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿಲ್ಲಿಯಲ್ಲಿ ವಾಸವಿದ್ದ ಈ ಮಹಿಳೆ ರಾತ್ರಿ 1:30ರ ಸುಮಾರಿಗೆ ಸಿಕಂದರಪುರ ಮೆಟ್ರೋ ಸ್ಟೇಷನ್ ಬಳಿ ನಿಂತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನ ಬೈಕ್ನಲ್ಲಿ ಡಿಎಲ್ಎಫ್ 2ನೇ ಹಂತದಲ್ಲಿದ್ದ ಆತನ ಕಚೇರಿಗೆ ಮಹಿಳೆ ತೆರಳಿದ್ದಾಳೆ. ಕಚೇರಿಗೆ ತಲುಪಿದಾಗ ಆರೋಪಿಯ ಮೂವರು ಸ್ನೇಹಿತರು ಅಲ್ಲಿದ್ದರು. ಹೀಗಾಗಿ ಮುಜುಗರ ಅನುಭವಿಸಿದ ಮಹಿಳೆ ಅಲ್ಲಿಂದ ಹೊರಡಲು ಮುಂದಾಗಿದ್ದು ಆರೋಪಿಗಳು ಬಲವಂತವಾಗಿ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಹಿಳೆಯ ತೀವ್ರ ವಿರೋಧದ ನಡುವೆಯೂ ನಾಲ್ಕು ಮಂದಿ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದರು ಎಂದು ಸಂತ್ರಸ್ತೆಯ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ. ಮಹಿಳೆಗೆ ಹಲ್ಲೆಗೈದು ಗೋಡೆ ಹಾಗೂ ನೆಲಕ್ಕೆ ತಲೆಯನ್ನು ಚಚ್ಚಿದ್ದಾರೆ.
ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸಂತ್ರಸ್ತೆಯನ್ನು ನೋಡಿದ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm