ಬ್ರೇಕಿಂಗ್ ನ್ಯೂಸ್
05-10-20 12:57 pm Headline Karnataka News Network ಕ್ರೈಂ
ನವದೆಹಲಿ, ಅಕ್ಟೋಬರ್ 5: ಹತ್ರಾಸ್ ಸಾಮೂಹಿಕ ಅತ್ಯಾಚಾರ, ಮಹಿಳೆಯ ಸಾವಿನ ಘಟನೆ ವಿರುದ್ಧ ದೇಶಾದ್ಯಂತ ಆಕ್ರೋಶ ಎದ್ದಿರುವ ನಡುವಲ್ಲೇ 25ರ ಮಹಿಳೆ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದ ಮತ್ತೊಂದು ಪ್ರಕರಣ ರಾಜಧಾನಿ ದೆಹಲಿ ಹೊರವಲಯದ ಗುರುಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆಯ ತಲೆಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದಿಲ್ಲಿಯಲ್ಲಿ ವಾಸವಿದ್ದ ಈ ಮಹಿಳೆ ರಾತ್ರಿ 1:30ರ ಸುಮಾರಿಗೆ ಸಿಕಂದರಪುರ ಮೆಟ್ರೋ ಸ್ಟೇಷನ್ ಬಳಿ ನಿಂತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನ ಪರಿಚಯವಾಗಿದ್ದು, ಆತನ ಬೈಕ್ನಲ್ಲಿ ಡಿಎಲ್ಎಫ್ 2ನೇ ಹಂತದಲ್ಲಿದ್ದ ಆತನ ಕಚೇರಿಗೆ ಮಹಿಳೆ ತೆರಳಿದ್ದಾಳೆ. ಕಚೇರಿಗೆ ತಲುಪಿದಾಗ ಆರೋಪಿಯ ಮೂವರು ಸ್ನೇಹಿತರು ಅಲ್ಲಿದ್ದರು. ಹೀಗಾಗಿ ಮುಜುಗರ ಅನುಭವಿಸಿದ ಮಹಿಳೆ ಅಲ್ಲಿಂದ ಹೊರಡಲು ಮುಂದಾಗಿದ್ದು ಆರೋಪಿಗಳು ಬಲವಂತವಾಗಿ ಆಕೆಯನ್ನು ತಡೆದು ಹಲ್ಲೆ ನಡೆಸಿದ್ದಾರೆ. ಮಹಿಳೆಯ ತೀವ್ರ ವಿರೋಧದ ನಡುವೆಯೂ ನಾಲ್ಕು ಮಂದಿ ಅತ್ಯಾಚಾರ ಎಸಗಿ ಹಲ್ಲೆ ನಡೆಸಿದರು ಎಂದು ಸಂತ್ರಸ್ತೆಯ ಹೇಳಿಕೆಯನ್ನು ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ. ಮಹಿಳೆಗೆ ಹಲ್ಲೆಗೈದು ಗೋಡೆ ಹಾಗೂ ನೆಲಕ್ಕೆ ತಲೆಯನ್ನು ಚಚ್ಚಿದ್ದಾರೆ.
ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕ ಆಕೆಯನ್ನು ಬಿಟ್ಟು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಸಂತ್ರಸ್ತೆಯನ್ನು ನೋಡಿದ ಖಾಸಗಿ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm