ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am