ಬ್ರೇಕಿಂಗ್ ನ್ಯೂಸ್
18-08-22 05:11 pm HK News Desk ಕ್ರೈಂ
ಹಾಸನ, ಆಗಸ್ಟ್ 18: ನಿಧಿಯಾಸೆ ತೋರಿಸಿ ತಾನೇ ಹೂತಿಟ್ಟ ಚಿನ್ನದ ಲೇಪನದ ವಿಗ್ರಹವನ್ನು ತೆಗೆದು ಕೊಟ್ಟು ನಕಲಿ ಸ್ವಾಮೀಜಿಯೊಬ್ಬ ಬರೋಬ್ಬರಿ ಐದು ಲಕ್ಷ ರೂಪಾಯಿ ಪೀಕಿಸಿದ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮನೆಯ ತೋಟದಲ್ಲಿ ನಿಧಿ ಇದೆ ಎಂದು ಆಸೆ ತೋರಿಸಿ ಹಣ ಪೀಕಿಸಿದ್ದಲ್ಲದೆ, ಅವರದೇ ಜಮೀನಿನಲ್ಲಿ ಚಿನ್ನದ ವಿಗ್ರಹ ಎಂದು ಹೇಳಿ ಅಗೆದು ತೆಗೆದುಕೊಟ್ಟಿದ್ದಾನೆ. ವಂಚನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ವಂಚಕನನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಅವರ ಪುತ್ರ ಪುನೀತ್ ಎಂಬವರು ಮೋಸ ಹೋದವರು. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ, ಅದನ್ನು ರಾತ್ರಿ ವೇಳೆ ನಿಧಿ ಹುಡುಕಿ ಕೊಡುವುದಾಗಿ ಹೇಳಿ ವಿಗ್ರಹ ತೋರಿಸಿ ನಂಬಿಸಿದ್ದಾನೆ. ಕಬ್ಬಿಣದ ವಿಗ್ರಹಕ್ಕೆ ಚಿನ್ನದ ಲೇಪನ ಹಾಕಿ ತಾನೇ ಭೂಮಿಯೊಳಗೆ ಹೂತಿಟ್ಟು ಮತ್ತೆ ಅದನ್ನೇ ತೆಗೆದು ಕೊಡುವ ವಿಡಿಯೋ ಲಭ್ಯವಾಗಿದೆ. ವಿಗ್ರಹ ತೆಗೆಯುವ ವೇಳೆ ರಕ್ತ ಬೇಕೆಂದು ಮಹಿಳೆಯೊಬ್ಬರ ಕೈ ಕೊಯ್ದು ರಕ್ತ ಸುರಿಸಿದ್ದಾನೆ. ಅರಕಲಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳ್ಳ ಸ್ವಾಮೀಜಿ ಮಂಜುನಾಥ್ ಮೂಲತಃ ದೊಡ್ಡಹಳ್ಳಿ ಗ್ರಾಮದವನಾಗಿದ್ದು, ಅಸಲಿ ವಿಷಯ ಬಹಿರಂಗ ಆಗುತ್ತಿದ್ದಂತೆಯೇ ಪರಾರಿಯಾಗಿದ್ದಾನೆ.
Hassan Fake swamiji cheats a couple of 5 lakhs in the name of searching treasure
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm