ಬ್ರೇಕಿಂಗ್ ನ್ಯೂಸ್
18-08-22 05:35 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 18: ಕಾನೂನು ವಿದ್ಯಾರ್ಥಿನಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಸಿಕ್ಕಿಬಿದ್ದ ವಕೀಲ ಕೆಎಸ್ಎನ್ ರಾಜೇಶ್ ವಿರುದ್ಧ ಮಂಗಳೂರು ದಕ್ಷಿಣ ಉಪ ವಿಭಾಗ ಎಸಿಪಿ ದಿನಕರ ಶೆಟ್ಟಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
2021ರ ಸೆಪ್ಟಂಬರ್ 25ರಂದು ಕರಂಗಲ್ಪಾಡಿಯ ಕಚೇರಿಯಲ್ಲಿದ್ದಾಗ ವಕೀಲ ಕೆಎಸ್ಎನ್ ರಾಜೇಶ್ ತನ್ನ ಮೇಲೆ ಅತ್ಯಾಚಾರ ನಡೆಸುವ ಉದ್ದೇಶದಿಂದ ಲೈಂಗಿಕ ಕಿರುಕುಳ ನೀಡಿದ್ದಾರೆಂದು ವಿದ್ಯಾರ್ಥಿನಿ ಅಕ್ಟೋಬರ್ 18ರಂದು ಉರ್ವಾ ಠಾಣೆಗೆ ದೂರು ನೀಡಿದ್ದರು. ಬಳಿಕ ಪ್ರಕರಣವನ್ನು ಮಹಿಳಾ ಠಾಣೆಗೆ ವರ್ಗಾಯಿಸಿ ಐಪಿಸಿ ಸೆಕ್ಷನ್ 376, 376(2) ಎಫ್, 376(2)ಕೆ, 376(ಸಿ)ಎ, 511, 354(ಎ), 354(ಬಿ), 354(ಸಿ), 354(ಡಿ), 506, 384, 388, 389, 204, 203, 212, 120 ಬಿ, 179, 202 ಜೊತೆಗೆ 149 ಅಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರದಲ್ಲಿ ಮಂಗಳೂರಿನ ಕೆಲವು ವಕೀಲರೇ ಮುತುವರ್ಜಿ ವಹಿಸಿದ್ದರಿಂದ ಕೇಸು ಬಿಗಿಯಾಗಿತ್ತು.

ಅಲ್ಲದೆ, ಅತ್ಯಾಚಾರ ಯತ್ನ ಪ್ರಕರಣ ಮಾಧ್ಯಮದಲ್ಲಿಯೂ ಭಾರೀ ಸುದ್ದಿಯಾಗಿದ್ದರಿಂದ ಆರೋಪಿ ವಕೀಲ ತಲೆಮರೆಸಿಕೊಂಡಿದ್ದರು. ಎರಡು ತಿಂಗಳ ಬಳಿಕ ಮಂಗಳೂರಿನ 3ನೇ ಜೆಎಂಎಫ್ ಕೋರ್ಟಿಗೆ ವಕೀಲ ಶರಣಾಗತಿಯಾಗಿದ್ದು, ಆನಂತರ ಪೊಲೀಸರು ಕಸ್ಟಡಿಗೆ ಪಡೆದು ತನಿಖೆ ನಡೆಸಿದ್ದರು. ಆ ಸಂದರ್ಭದಲ್ಲಿ ತನಿಖೆಯ ಹೊಣೆಯನ್ನು ನಗರ ದಕ್ಷಿಣ ಉಪವಿಭಾಗದ ಎಸಿಪಿಯಾಗಿದ್ದ ರಂಜಿತ್ ಕುಮಾರ್ ಬಂಡಾರು ಅವರಿಗೆ ವಹಿಸಲಾಗಿತ್ತು.
ಪ್ರಕರಣ ಕೈಗೆತ್ತಿಕೊಂಡ ಒಂದೇ ತಿಂಗಳಲ್ಲಿ ರಂಜಿತ್ ಕುಮಾರ್ ವರ್ಗಾವಣೆಯಾಗಿದ್ದು ತೆರವಾದ ಜಾಗಕ್ಕೆ ದಿನಕರ ಶೆಟ್ಟಿ ಬಂದಿದ್ದರು. ದಿನಕರ ಶೆಟ್ಟಿ ತನಿಖೆಯನ್ನು ಪೂರ್ತಿಗೊಳಿಸಿ ಇದೀಗ 3ನೇ ಜೆಎಂಎಫ್ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. 1ನೇ ಆರೋಪಿ ಕೆಎಸ್ಎನ್ ರಾಜೇಶ್ ಮತ್ತು ಆರೋಪಿ ಪರಾರಿಯಾಗಲು ಸಹಕರಿಸಿ 2ನೇ ಆರೋಪಿ ಅನಂತ ಭಟ್ ಮತ್ತು 3ನೇ ಆರೋಪಿ ಅಚ್ಚುತ್ತ ಭಟ್ ಶಿಕ್ಷಾರ್ಹ ಅಪರಾಧ ಎಸಗಿದ್ದಾರೆಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.
Mangalore Charge sheet filed against Lawyer KSN Rajesh over sexual harassment case. Two law student interns have filed complaints in the women's police station here, against special public prosecutor, K S N Rajesh of the Lokayukta division here, accusing him of sexual harassment and threat. A case has been registered against the advocate concerned.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm